ಬ್ರೇಕಿಂಗ್ ನ್ಯೂಸ್
24-08-25 02:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ 24 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಅಪರಾಧ ಕೃತ್ಯಗಳ ಆರೋಪ ಬಗ್ಗೆ AI ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಕೇಸ್ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕರೆದಾಗ ವಿಚಾರಣೆಗೆ ಹಾಜರಾಗಲು ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿ ಅವರ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

ನಾಲ್ವರು ವಕೀಲರ ಜೊತೆ ಬಂದ ಸಮೀರ್ :
ತಿಮರೋಡಿಯ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಬಂದ ಸಮೀರ್ ವಿಚಾರಣೆಗೆಂದು ಠಾಣೆ ಒಳಗೆ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ರು.
ಕ್ರೈಮ್ ನಂ 42/2025 ಕೇಸ್ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಸಮೀರ್ ಹಾಜರಾಗಿರಲಿಲ್ಲ.
ಬಂಧನ ಭೀತಿಯಲ್ಲಿದ್ದ ಸಮೀರ್ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆಗೆ ಸಹಕರಿಸುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.
YouTuber M.D. Sameer, who had created an AI-generated video related to alleged criminal incidents in Dharmasthala, appeared for police inquiry today at the Beltangady Police Station, accompanied by four lawyers. A case had been registered against him in connection with the video, and he was recently granted anticipatory bail by the Dakshina Kannada District Sessions Court.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm