ಬ್ರೇಕಿಂಗ್ ನ್ಯೂಸ್
26-08-25 10:36 am Mangalore Correspondent ಕರಾವಳಿ
ಬೆಳ್ತಂಗಡಿ, ಆ.26 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನನ್ನೇ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಆತನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆಯೇ, ಆರೋಪಿಗೆ ಆಶ್ರಯ ಕೊಟ್ಟಿರುವವರ ಮನೆಯನ್ನು ಪೊಲೀಸರು ಶೋಧಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿರುವ ಪೊಲೀಸರು ಆರೋಪಿಗೆ ಆಶ್ರಯ ನೀಡಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆಯೇ ದೂರುದಾರ ಕಂ ಆರೋಪಿ ಚಿನ್ನಯ್ಯನನ್ನು ಮಹೇಶ್ ಶೆಟ್ಟಿ ಅವರ ತಿಮರೋಡಿ ಗ್ರಾಮದ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆಶ್ರಯ ಕೊಟ್ಟ ಸಂದರ್ಭದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಿದ್ದಾರೆ. ಇದಕ್ಕಾಗಿ ಪುತ್ತೂರು, ಬೆಳ್ತಂಗಡಿಯಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಈ ವೇಳೆ, ಮಾಧ್ಯಮದವರನ್ನು ಎರಡು ಕಿಮೀ ದೂರದಲ್ಲೇ ತಡೆಯಲಾಗಿದೆ. ಧರ್ಮಸ್ಥಳ ತನಿಖೆ ಆರಂಭಗೊಂಡ ಸಂದರ್ಭದಲ್ಲಿ ಚಿನ್ನಯ್ಯನಿಗೆ ಮಹೇಶ್ ಶೆಟ್ಟಿ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು ಈ ಕಾರಣದಿಂದ ಎಸ್ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಆರೋಪಿ ಚಿನ್ನಯ್ಯನನ್ನು ಬಂಧಿಸಿದ್ದು ಸಂಪೂರ್ಣ ವಿಚಾರಣೆ ನಡೆಸಿದೆ. ಆಶ್ರಯ ಕೊಟ್ಟವರು ಯಾರು, ಷಡ್ಯಂತ್ರ ರೂಪಿಸಿದ್ದು ಯಾರು, ತಲೆಬುರುಡೆ ತಂದು ಕೊಟ್ಟಿದ್ದು ಯಾರು ಇತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆದಿದೆ.
ಇದರಂತೆ, ಎಸ್ಐಟಿ ತನಿಖೆ ಮುಂದುವರಿಯುವ ಸಾಧ್ಯತೆಗಳಿದ್ದು ಈ ಕಾರಣಕ್ಕೆ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟೆಣ್ಣನವರ್ ಸೇರಿದಂತೆ ಹೋರಾಟ ತಂಡದ ಸದಸ್ಯರನ್ನು ಪೊಲೀಸರು ಮತ್ತೆ ಬಂಧಿಸುವ ಸಾಧ್ಯತೆ ಅಲ್ಲಗಳೆಯಲಾಗದು.
In the Dharmasthala case, the SIT, which recently arrested the complainant Chinnayya and turned him into an accused, has now expanded its probe to those who allegedly sheltered him. Acting on a search warrant issued by the Beltangady court, SIT officials today raided the house of activist Mahesh Shetty of Timarodi, known for supporting Soujanya’s cause. This morning, the SIT brought accused Chinnayya to Mahesh Shetty’s residence and conducted a spot inspection
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm