ಬ್ರೇಕಿಂಗ್ ನ್ಯೂಸ್
27-08-25 11:02 pm Mangalore Correspondent ಕರಾವಳಿ
ಮಂಗಳೂರು, ಆ.27 : ಅಂತಾರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೆಸರಿನಲ್ಲಿ ಬೆಳ್ತಂಗಡಿಗೆ ಬಂದು ಡ್ರಾಮಾ ಸೃಷ್ಟಿಸಿರುವ ಹುಬ್ಬಳ್ಳಿಯ ರೌಡಿಶೀಟರ್ ಮದನ್ ಮುಗಡಿ ಮತ್ತು ಬೆಂಗಳೂರಿನ ಪ್ಯಾಸ್ಟರ್ ಜಾನ್ ಶೈಮನ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ. ತಮ್ಮ ಬಗ್ಗೆ ಟೀಕೆ ಕೇಳಿಬರುತ್ತಲೇ ಜಾನ್ ಶೈಮನ್, ತನ್ನ ಕ್ರೈಸ್ತ ಬಳಗದವರನ್ನು ಉದ್ದೇಶಿಸಿ ಯೂಟ್ಯೂಬ್ ನಲ್ಲಿ ವಿಡಿಯೋ ಬಿಟ್ಟಿದ್ದಾನೆ.
ಮದನ್ ಮುಗಡಿ ಹಿಂದೆ ರೌಡಿಸಂ ಮಾಡುತ್ತಿದ್ದರೂ, ಈಗ ಅಪರಾಧ ಚಟುವಟಿಕೆಯಿಂದ ದೂರ ಇರುವುದಲ್ಲದೆ, ಕ್ರಿಶ್ಚಿಯನ್ ಆಗಿ ಮತಾಂತರ ಆಗಿದ್ದಾರೆ. ನಮ್ಮಲ್ಲಿ ಸನ್ನಡತೆಯಿಂದ ನಡೆದುಕೊಳ್ಳುವುದಾಗಿ ಮತ್ತು ಆಯೋಗದ ಸದಸ್ಯನೆಂದು ಪ್ರಮಾಣವಚನ ಸ್ವೀಕರಿಸಿದ್ದಾನೆ. ಆದರೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ ನಮ್ಮ ಬಗ್ಗೆ ವಿನಾಕಾರಣ ಸುದ್ದಿ ಪ್ರಸಾರಿಸಿ ಮಾನಹಾನಿ ಮಾಡಲಾಗಿದೆ. ನಮ್ಮ ವಿರುದ್ಧ ಸುದ್ದಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಈ ವಿಡಿಯೋದಲ್ಲಿ ತಿಳಿಸಿದ್ದಾನೆ.

ಅಲ್ಲದೆ, ಈ ಸುದ್ದಿಯನ್ನು ಯಾರೂ ನಂಬಬೇಡಿ. ಸಮಾಜದಲ್ಲಿ ಶೋಷಿತರು, ದಲಿತರು, ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾದವರು, ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ಮಾಡಿದ್ದೆವು. ನಮ್ಮ ಸಂಘಟನೆ ಕೇಂದ್ರ ಸರ್ಕಾರದ ನೀತಿ ಆಯೋಗದಲ್ಲಿ ರಿಜಿಸ್ಟರ್ ಆಗಿದ್ದು ಸರ್ಕಾರದ ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಿದೆ. ಯಾರೋ ಒಬ್ಬರು ಫೋನ್ ಕರೆ ಮಾಡಿದ್ದಕ್ಕೆ ಬೆಳ್ತಂಗಡಿಗೆ ಹೋಗಿದ್ದೆವು, ಅಲ್ಲಿ ಬೇರಾವುದೇ ಅಪಚಾರ ಮಾಡಿಲ್ಲ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ವಿಡಿಯೋದಲ್ಲಿ ಹೆಡ್ ಲೈನ್ ಕರ್ನಾಟಕದಲ್ಲಿ ಬಂದಿರುವ ಸುದ್ದಿ ತುಣುಕನ್ನೂ ಹಾಕ್ಕೊಂಡಿದ್ದಾನೆ.

ಮಟ್ಟೆಣ್ಣನವರ್ ವಿರುದ್ದ ಆಯೋಗಕ್ಕೆ ದೂರು
ಇದೇ ವೇಳೆ, ಬೆಂಗಳೂರಿನ ಸುರೇಶ್ ಗೌಡ ಎಂಬವರು ಗಿರೀಶ್ ಮಟ್ಟೆಣ್ಣನವರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ರೌಡಿಯೊಬ್ಬನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ಗಿರೀಶ್ ಮಟ್ಟೆಣ್ಣನವರ್ ಮಾಧ್ಯಮ ಮತ್ತು ಧರ್ಮಸ್ಥಳ ಪೊಲೀಸರ ಮುಂದೆ ಹೇಳಿಕೊಂಡಿದ್ದು ಆಮೂಲಕ ಇಲಾಖೆಯ ಹೆಸರನ್ನು ದುರುಪಯೋಗ ಪಡಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
Madan Bugadi, a known rowdy-sheeter from Hubballi who has reportedly converted to Christianity, and Pastor John Shaiman from Bengaluru are now facing severe criticism for allegedly staging a “drama” in Belthangady under the banner of the International Human Rights Commission. In response to growing backlash, Pastor John Shaiman released a video on YouTube addressing his Christian followers. In the video, he defended Madan Bugadi, stating that although he had a criminal past, he has since reformed, embraced Christianity, and taken an oath as a member of their commission.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm