ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am