ಬ್ರೇಕಿಂಗ್ ನ್ಯೂಸ್
30-08-25 09:16 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯ ಮೃತದೇಹ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಅವರು ಆ.28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯನ ಗುಡಿಯಲ್ಲಿ ಕೆಲ ಕಾಲ ಕಳೆದು ಸೌಪರ್ಣಿಕಾ ನದಿಯತ್ತ ತೆರಳಿದ್ದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಸೇರಿದಂತೆ ಎಲ್ಲ ವಸ್ತುಗಳನ್ನು ಕಾರಿನಲ್ಲಿಯೇ ಬಿಟ್ಟು ಹೋಗಿದ್ದು ಶಂಕೆಗೆ ಕಾರಣವಾಗಿತ್ತು.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತ ವಿಷಯ ತಿಳಿದು ಆಕೆಯ ಕುಟುಂಬಸ್ಥರು ಕೂಡ ಕೊಲ್ಲೂರಿಗೆ ಆಗಮಿಸಿದ್ದರು.
ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಶನಿವಾರವೂ ಹುಡುಕಾಟ ನಡೆಸಿತ್ತು. ಹುಡುಕಾಟ ಸಂದರ್ಭದಲ್ಲಿ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲ್ಲೂರು ಪೊಲೀಸರು, ಸ್ಥಳೀಯರು ಹುಡುಕಾಟದಲ್ಲಿ ತೊಡಗಿಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
The body of a married woman from Bengaluru, who had gone missing after visiting the Kollur temple, has been found in the Souparnika River near Mavinakaru. The circumstances surrounding her death remain unclear – whether it was a case of suicide or a tragic accident during a ritual bath.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm