ಬ್ರೇಕಿಂಗ್ ನ್ಯೂಸ್
30-08-25 10:10 pm Mangalore Correspondent ಕರಾವಳಿ
ಮಂಗಳೂರು, ಆ.30 : ಗಣೇಶೋತ್ಸವ ಸಾಮರಸ್ಯದ ಪ್ರತೀಕ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸಲು ಬಾಲಗಂಗಾಧರ ತಿಲಕರು ಅನುಷ್ಠಾನಕ್ಕೆ ತಂದಿದ್ದ ಗಣೇಶೋತ್ಸವದಲ್ಲಿ ಎಲ್ಲ ಮತ ಬಾಂಧವರು ಭಾಗವಹಿಸುತ್ತಾರೆ. ಮಂಗಳೂರಿನ ಆರೆಸ್ಸೆಸ್ ಕಾರ್ಯಾಲಯ ಸಂಘನಿಕೇತನದಲ್ಲಿ 78ನೇ ವರ್ಷದ ಗಣೇಶೋತ್ಸವ ನಡೆಯುತ್ತಿದ್ದು ಶನಿವಾರ ಕ್ರಿಶ್ಚಿಯನ್ ಪ್ರತಿನಿಧಿಗಳು ಪಾಲ್ಗೊಂಡು ಗಣೇಶನಿಗೆ ನಮಿಸಿ ಪ್ರಸಾದ ಸ್ವೀಕರಿಸಿದರು.
ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ನೇತೃತ್ವದಲ್ಲಿ ಕ್ರಿಶ್ಚಿಯನ್ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ಹೂ, ಹಣ್ಣುಗಳನ್ನು ಸಮರ್ಪಿಸಿತು. ಗಣೇಶನ ಪ್ರಸಾದವನ್ನು ಸ್ವೀಕರಿಸಿ, ಆರೆಸ್ಸೆಸ್ ನೂತನ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಮುಖರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವೇದಿಕೆಯ ಸಂಚಾಲಕ ಫ್ರಾೃಂಕ್ಲಿನ್ ಮೊಂತೆರೋ, ಮತ- ಧರ್ಮದ ಆಚರಣೆ ಬೇರೆ ಇದ್ದರೂ ರಾಷ್ಟ್ರೀಯತೆಯಲ್ಲಿ ನಾವೆಲ್ಲ ಒಂದೇ ಎಂಬ ಸಂದೇಶ ರವಾನಿಸುವುದು ನಮ್ಮ ಉದ್ದೇಶ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಆಶಯ ಕೂಡ ರಾಷ್ಟ್ರೀಯ ಐಕ್ಯತೆ. ಹಾಗಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಭಕ್ತಿ, ಶ್ರದ್ಧೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯಿಂದ ಪ್ರತಿ ವರ್ಷ ಈ ಭೇಟಿ ಹಮ್ಮಿಕೊಳ್ಳುತ್ತಿದ್ದೇವೆ. ಈ ಬಾರಿಯೂ 18 ಮಂದಿ ಕ್ರಿಶ್ಚಿಯನ್ ಪ್ರತಿನಿಧಿಗಳು ಆಗಮಿಸಿ, ಗಣೇಶನ ಪ್ರಸಾದ ಸ್ವೀಕರಿಸಿದ್ದಾರೆ ಎಂದರು.





ಕೇಶವ ಸ್ಮತಿ ಸಂವರ್ಧನಾ ಸಮಿತಿಯ ಉಪಾಧ್ಯಕ್ಷ ಸತೀಶ್ ಪ್ರಭು ಮಾತನಾಡಿ, ಸಮಾಜದ ಕ್ರೈಸ್ತ ಬಂಧುಗಳು ಪ್ರತೀ ವರ್ಷವೂ ಭೇಟಿ ನೀಡಿ ಸಾಮರಸ್ಯದ ಸಂದೇಶ ನೀಡುತ್ತಿದ್ದಾರೆ. ಬಾಲಗಂಗಾಧರ ತಿಲಕರ ಚಿಂತನೆಯನ್ನು ಸಾಕಾರ ಮಾಡುತ್ತಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿ, ಸಮಷ್ಟಿ ಚಿಂತನೆಯಿಂದ ಸಾರ್ವಜನಿಕ ಗಣೇಶೋತ್ಸವ ಆರಂಭಿಸಲಾಗಿತ್ತು. ಗಣಪತಿಯ ಅನುಗ್ರಹದಿಂದ ಸ್ವಾತಂತ್ರ್ಯ ಕಾಲದಿಂದಲೂ ಇಲ್ಲಿ ಗಣೇಶನ ಉತ್ಸವ ನಡೆದುಬಂದಿದೆ ಎಂದು ಹೇಳಿದರು.
ಭರತನಾಟ್ಯದಲ್ಲಿ ಇತ್ತೀಚೆಗೆ ವಿಶ್ವ ದಾಖಲೆ ಮಾಡಿದ ರೆಮೊನಾ ಇವೆಟ್ ಪಿರೇರಾ ಅವರನ್ನು ಇದೇ ವೇಳೆ, ಗಣೇಶೋತ್ಸವ ಸಮಿತಿ ವತಿಯಿಂದ ಗೌರವಿಸಲಾಯಿತು. ಬಳಿಕ ಸಾಮರಸ್ಯದ ಸಂಕೇತವಾಗಿ ಜೊತೆಯಾಗಿ ಉಪಹಾರ ಸ್ವೀಕರಿಸಿದರು. ಕೇಶವ ಸ್ಮತಿ ಸಂವರ್ಧನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್, ಪದಾಧಿಕಾರಿಗಳಾದ ಜಿ.ಸುರೇಶ್ ವಿ.ಕಾಮತ್, ಯೋಗೀಶ್ ಆಚಾರ್, ವಿನೋದ್ ಶೆಣೈ, ಅಭಿಷೇಕ್ ಭಂಡಾರಿ, ಆರ್ಎಸ್ಎಸ್ ಪ್ರಮುಖರಾದ ಪಿ.ಎಸ್.ಪ್ರಕಾಶ್, ಸತೀಶ್ ರಾವ್, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಡಾ.ಜೆಸ್ಸಿ ಮರಿಯಾ, ಡಾ.ಎಲ್ವಿಸ್ ರೋಡ್ರಿಗಸ್, ಡಾ.ತೆರೆಸಾ ಲಿಡಿಯಾ ಮೆಂಡೋನ್ಸಾ, ಪ್ರೊ.ಸಂಧ್ಯಾ ಡಿಸೋಜ, ಲ್ಯಾನಿ ಮರೀಜಾ ಪಿಂಟೋ, ರೇಷ್ಮಾ ಡಿಸೋಜ, ಪ್ರವೀಣ್ ತಾವ್ರೊ, ಮ್ಯಾಕ್ಸಿಂ ಪಿರೇರಾ, ಅರುಣ್ರಾಜ್ ರೋಡ್ರಿಗಸ್, ವಿನೋದ್ ಪಿಂಟೋ, ನವೀನ್ ಫರ್ನಾಂಡಿಸ್ ಮತ್ತಿತರರು ಉಪಸ್ಥಿತರಿದ್ದರು.
Ganesh Chaturthi has long stood as a symbol of harmony, first introduced during the freedom movement by Bal Gangadhar Tilak to unite people across communities. Continuing this legacy, the 78th annual Ganeshotsav is being celebrated at Sanghaniketan, the RSS office in Mangaluru. On Saturday, a delegation of Christian representatives participated in the celebrations, offered prayers, and received prasada.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm