ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm