ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm