ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm