ಬ್ರೇಕಿಂಗ್ ನ್ಯೂಸ್
30-08-25 11:08 pm Mangalore Correspondent ಕರಾವಳಿ
ಮಂಗಳೂರು, ಆ.30 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಚಿನ್ನಯ್ಯ ಹೇಳಿಕೆಯಲ್ಲಿ ತಿಳಿಸಿರುವಂತೆ, ಸೌಜನ್ಯಾ ಪರ ಹೋರಾಟಗಾರ ಜಯನ್ ಅವರ ಬೆಂಗಳೂರಿನ ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ವಿಚಾರಣೆ ವೇಳೆ ಚಿನ್ನಯ್ಯ ಜಯಂತ್ ಹೆಸರು ಬಾಯ್ಬಿಟ್ಟಿದ್ದು ಇದರಂತೆ ಬೆಂಗಳೂರಿನ ಮಲ್ಲಸಂದ್ರದಲ್ಲಿರುವ ಮನೆಗೆ ಎಸ್ಐಟಿ ಅಧಿಕಾರಿಗಳು ಶನಿವಾರ ತೆರಳಿದ್ದಾರೆ. ಮಲ್ಲಸಂದ್ರದಲ್ಲಿರುವ ಜಯಂತ್ ಅವರ ಬಾಡಿಗೆ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಜಯಂತ್ ಬಾಡಿಗೆ ಮನೆಯಲ್ಲಿ ಚಿನ್ನಯ್ಯ ಏಪ್ರಿಲ್ ತಿಂಗಳಲ್ಲಿ ಕೆಲವು ದಿನಗಳ ಕಾಲ ಉಳಿದುಕೊಂಡಿದ್ದ ಎನ್ನಲಾಗ್ತಿದೆ.
ಇದೇ ವೇಳೆ, ಖಾಸಗಿ ವಾಹಿನಿಗೆ ಮಾಹಿತಿ ಹಂಚಿಕೊಂಡಿರುವ ಜಯಂತ್, ಬೆಂಗಳೂರಿನಲ್ಲಿ ಮಗ ಮತ್ತು ಮಗಳು ಇದ್ದಾರೆ. ಚಿನ್ನಯ್ಯನ ಜೊತೆಗೆ ಬೆಂಗಳೂರು ತೆರಳಿದ್ದಾಗ ಎರಡು ದಿನ ನಮ್ಮ ಜೊತೆಗೆ ಇದ್ದ. ನಮ್ಮ ಮನೆಯಲ್ಲೇ ಉಳಿಯುವಂತೆ ಹೇಳಿದ್ದೆವು. ಆನಂತರ, ದೆಹಲಿಗೂ ಹೋಗಿದ್ದೆವು. ಮಟ್ಟೆಣ್ಣನವರ್, ಸುಜಾತಾ, ನಾನು ಮತ್ತು ಚಿನ್ನಯ್ಯ ಸೇರಿ ದೆಹಲಿಗೆ ಹೋಗಿದ್ದೆವು. ದೆಹಲಿಯಲ್ಲಿ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಲು ಹೋಗಿದ್ದೆವು. ಆದರೆ ಅದು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.
ನಾವು ದೆಹಲಿಗೆ ಹೋಗಿದ್ದು ನಿಜ. ಬೆಂಗಳೂರಿನಲ್ಲಿ ಉಳಿದುಕೊಂಡಿದ್ದೂ ನಿಜ. ಆ ವೇಳೆಗೆ, ವಿಷಯ ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ. ಆದರೆ ಚಿನ್ನಯ್ಯನೇ ತಲೆಬುರುಡೆ ತಂದಿರೋದು. ಆತ ಹೆಣ ಹೂತು ಹಾಕಿದ್ದು ಸತ್ಯ. ಈಗ ಮಾತ್ರ ಆತ ನಡೆದುಕೊಳ್ಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಈಗ ತಲೆಬುರುಡೆ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾನೆ. ಮೊನ್ನೆ ತಿಮರೋಡಿ ತೋಟದಲ್ಲಿ ಇತ್ತೆಂದು ಹೇಳಿದ್ದ. ಲ್ಯಾಬ್ ನಲ್ಲಿ ತಂದಿದ್ದರೆ ಎಲ್ಲಿಂದ ಅಂತ ಹೇಳಲಿ ಮತ್ತು ಆ ಲ್ಯಾಬ್ ನವರನ್ನು ತನಿಖೆ ಮಾಡಲಿ. ನಾವು ಬೆಂಗಳೂರಿನಲ್ಲಿ ಒಟ್ಟಿಗೆ ಉಳಿದಿದ್ದು ಅಪರಾಧ ಅಂತಾದರೆ ಅದಕ್ಕೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಜಯನ್ ಹೇಳಿದ್ದಾರೆ.
In a fresh development in the Dharmasthala human remains burial case, SIT officials probing the allegations reportedly took key accused Chinnayya from Beltangady to Bengaluru for a spot inspection. As per Chinnayya's statement, the SIT team visited the residence of activist Jayan in Malleshwaram, Bengaluru, to verify certain details.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm