ಬ್ರೇಕಿಂಗ್ ನ್ಯೂಸ್
30-08-25 11:08 pm Mangalore Correspondent ಕರಾವಳಿ
ಮಂಗಳೂರು, ಆ.30 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಚಿನ್ನಯ್ಯ ಹೇಳಿಕೆಯಲ್ಲಿ ತಿಳಿಸಿರುವಂತೆ, ಸೌಜನ್ಯಾ ಪರ ಹೋರಾಟಗಾರ ಜಯನ್ ಅವರ ಬೆಂಗಳೂರಿನ ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ವಿಚಾರಣೆ ವೇಳೆ ಚಿನ್ನಯ್ಯ ಜಯಂತ್ ಹೆಸರು ಬಾಯ್ಬಿಟ್ಟಿದ್ದು ಇದರಂತೆ ಬೆಂಗಳೂರಿನ ಮಲ್ಲಸಂದ್ರದಲ್ಲಿರುವ ಮನೆಗೆ ಎಸ್ಐಟಿ ಅಧಿಕಾರಿಗಳು ಶನಿವಾರ ತೆರಳಿದ್ದಾರೆ. ಮಲ್ಲಸಂದ್ರದಲ್ಲಿರುವ ಜಯಂತ್ ಅವರ ಬಾಡಿಗೆ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಜಯಂತ್ ಬಾಡಿಗೆ ಮನೆಯಲ್ಲಿ ಚಿನ್ನಯ್ಯ ಏಪ್ರಿಲ್ ತಿಂಗಳಲ್ಲಿ ಕೆಲವು ದಿನಗಳ ಕಾಲ ಉಳಿದುಕೊಂಡಿದ್ದ ಎನ್ನಲಾಗ್ತಿದೆ.
ಇದೇ ವೇಳೆ, ಖಾಸಗಿ ವಾಹಿನಿಗೆ ಮಾಹಿತಿ ಹಂಚಿಕೊಂಡಿರುವ ಜಯಂತ್, ಬೆಂಗಳೂರಿನಲ್ಲಿ ಮಗ ಮತ್ತು ಮಗಳು ಇದ್ದಾರೆ. ಚಿನ್ನಯ್ಯನ ಜೊತೆಗೆ ಬೆಂಗಳೂರು ತೆರಳಿದ್ದಾಗ ಎರಡು ದಿನ ನಮ್ಮ ಜೊತೆಗೆ ಇದ್ದ. ನಮ್ಮ ಮನೆಯಲ್ಲೇ ಉಳಿಯುವಂತೆ ಹೇಳಿದ್ದೆವು. ಆನಂತರ, ದೆಹಲಿಗೂ ಹೋಗಿದ್ದೆವು. ಮಟ್ಟೆಣ್ಣನವರ್, ಸುಜಾತಾ, ನಾನು ಮತ್ತು ಚಿನ್ನಯ್ಯ ಸೇರಿ ದೆಹಲಿಗೆ ಹೋಗಿದ್ದೆವು. ದೆಹಲಿಯಲ್ಲಿ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಲು ಹೋಗಿದ್ದೆವು. ಆದರೆ ಅದು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.
ನಾವು ದೆಹಲಿಗೆ ಹೋಗಿದ್ದು ನಿಜ. ಬೆಂಗಳೂರಿನಲ್ಲಿ ಉಳಿದುಕೊಂಡಿದ್ದೂ ನಿಜ. ಆ ವೇಳೆಗೆ, ವಿಷಯ ಇಷ್ಟು ದೊಡ್ಡದು ಆಗುತ್ತೆ ಅಂತ ಗೊತ್ತಿರಲಿಲ್ಲ. ಆದರೆ ಚಿನ್ನಯ್ಯನೇ ತಲೆಬುರುಡೆ ತಂದಿರೋದು. ಆತ ಹೆಣ ಹೂತು ಹಾಕಿದ್ದು ಸತ್ಯ. ಈಗ ಮಾತ್ರ ಆತ ನಡೆದುಕೊಳ್ಳುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಈಗ ತಲೆಬುರುಡೆ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾನೆ. ಮೊನ್ನೆ ತಿಮರೋಡಿ ತೋಟದಲ್ಲಿ ಇತ್ತೆಂದು ಹೇಳಿದ್ದ. ಲ್ಯಾಬ್ ನಲ್ಲಿ ತಂದಿದ್ದರೆ ಎಲ್ಲಿಂದ ಅಂತ ಹೇಳಲಿ ಮತ್ತು ಆ ಲ್ಯಾಬ್ ನವರನ್ನು ತನಿಖೆ ಮಾಡಲಿ. ನಾವು ಬೆಂಗಳೂರಿನಲ್ಲಿ ಒಟ್ಟಿಗೆ ಉಳಿದಿದ್ದು ಅಪರಾಧ ಅಂತಾದರೆ ಅದಕ್ಕೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಜಯನ್ ಹೇಳಿದ್ದಾರೆ.
In a fresh development in the Dharmasthala human remains burial case, SIT officials probing the allegations reportedly took key accused Chinnayya from Beltangady to Bengaluru for a spot inspection. As per Chinnayya's statement, the SIT team visited the residence of activist Jayan in Malleshwaram, Bengaluru, to verify certain details.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm