ಬ್ರೇಕಿಂಗ್ ನ್ಯೂಸ್
            
                        02-09-25 10:26 pm Mangalore Correspondent ಕರಾವಳಿ
            ಬೆಳ್ತಂಗಡಿ, ಸೆ.2 : ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ಪಡೆಯುತ್ತಿದ್ದು, ಅಲ್ಲಿ ವಿವಿಧ ಕಾರಣಕ್ಕೆ ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರು ಎನ್ನಲಾದ ಗುಂಪೊಂದು ವಿಶೇಷ ತನಿಖಾ ತಂಡಕ್ಕೆ ಪತ್ರ ಬರೆದಿದೆ. ಆಮೂಲಕ ದೂರುದಾರನ ಜಾಗಕ್ಕೆ ಹೊಸಬರು ಎಂಟ್ರಿಯಾಗಿದ್ದಾರೆ.
ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಿರುವ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸಿ, ಹೂತು ಹಾಕಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಶವ ಹೂತ ಘಟನೆಗಳು ರಹಸ್ಯವಾಗಿ ನಡೆದಿದ್ದರೂ, ಹಳ್ಳಿ ಜನರಿಗೆ ತಿಳಿಯದ ವಿಷಯವಲ್ಲ. ಅಸ್ಥಿಪಂಜರಗಳನ್ನು ಹೂತಿರುವುದಾಗಿ ಸಾಕ್ಷಿದಾರ ವ್ಯಕ್ತಿ ಮೊದಲಿಗೆ ಹೇಳಿದ್ದ. ಆದರೆ, ನಂತರ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.
ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿಗೆ ನಾವು ಸಹಕರಿಸುತ್ತೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
            
            
            The sensational Dharmasthala case has taken yet another dramatic turn, with a group of locals claiming they are willing to show the locations where bodies of murder victims were allegedly buried. A letter submitted to the Special Investigation Team (SIT) by a resident of Dharmasthala has brought new allegations and witnesses into the spotlight.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm