ಬ್ರೇಕಿಂಗ್ ನ್ಯೂಸ್
02-09-25 10:26 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.2 : ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ಪಡೆಯುತ್ತಿದ್ದು, ಅಲ್ಲಿ ವಿವಿಧ ಕಾರಣಕ್ಕೆ ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರು ಎನ್ನಲಾದ ಗುಂಪೊಂದು ವಿಶೇಷ ತನಿಖಾ ತಂಡಕ್ಕೆ ಪತ್ರ ಬರೆದಿದೆ. ಆಮೂಲಕ ದೂರುದಾರನ ಜಾಗಕ್ಕೆ ಹೊಸಬರು ಎಂಟ್ರಿಯಾಗಿದ್ದಾರೆ.
ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಿರುವ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸಿ, ಹೂತು ಹಾಕಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಶವ ಹೂತ ಘಟನೆಗಳು ರಹಸ್ಯವಾಗಿ ನಡೆದಿದ್ದರೂ, ಹಳ್ಳಿ ಜನರಿಗೆ ತಿಳಿಯದ ವಿಷಯವಲ್ಲ. ಅಸ್ಥಿಪಂಜರಗಳನ್ನು ಹೂತಿರುವುದಾಗಿ ಸಾಕ್ಷಿದಾರ ವ್ಯಕ್ತಿ ಮೊದಲಿಗೆ ಹೇಳಿದ್ದ. ಆದರೆ, ನಂತರ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.
ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿಗೆ ನಾವು ಸಹಕರಿಸುತ್ತೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
The sensational Dharmasthala case has taken yet another dramatic turn, with a group of locals claiming they are willing to show the locations where bodies of murder victims were allegedly buried. A letter submitted to the Special Investigation Team (SIT) by a resident of Dharmasthala has brought new allegations and witnesses into the spotlight.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm