ಬ್ರೇಕಿಂಗ್ ನ್ಯೂಸ್
05-09-25 05:09 pm Mangalore Correspondent ಕರಾವಳಿ
ಮಂಗಳೂರು, ಸೆ.5 : ರಾತ್ರಿ ಗಸ್ತು ನಿರತರಾಗಿದ್ದ ಕಂಕನಾಡಿ ನಗರ ಠಾಣೆ ಎಎಸ್ಐ ಅಶೋಕ್ ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಬಂಧಿತ ಆರೋಪಿ. ಸೆ.2 ರಂದು ತಡರಾತ್ರಿ ಅಶೋಕ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ನಲ್ಲಿದ್ದಾಗ ನಾಗುರಿಯಲ್ಲಿ ಚಿಕನ್ ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಜತೆ ಏಳೆಂಟು ಮಂದಿ ನಿಂತಿದ್ದರು. ಅಲ್ಲಿದ್ದವರನ್ನು ಯಾಕೆ నింತಿದ್ದೀರಿ ಎಂದು ಪ್ರಶ್ನಿಸಿದಾಗ ಹಿಂದುಗಡೆಯ ಅಡುಗೆ ಕೋಣೆಯಿಂದ ಏಕಾಏಕಿ ಬಂದ ಸುಲೈಮಾನ್, ನಮ್ಮನ್ನು ಕೇಳಲು ನೀವು ಯಾರು? ನಾನು ಏನು ಬೇಕಾದರೂ ಮಾಡಿಯೇನು, ನಿನ್ನನ್ನು ಬಿಡುವುದಿಲ್ಲ ಎಂದು ಅಶೋಕ್ ಅವರ ಮೇಲೆ ಕೈಯಿಂದ ಹಲ್ಲೆ ನಡೆಸಲು ಬಂದಿದ್ದಾನೆ. ಆಗ ಅವರು ತಪ್ಪಿಸಿಕೊಂಡಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಮೊಬೈಲ್ಗೆ ಅಳವಡಿಸಿದ್ದ ಫಿಂಗರ್ ಪ್ರಿಂಟ್ ಸ್ಕ್ಯಾನರನ್ನು ಆರೋಪಿ ಹಿಡಿದು ಎಳೆದು ತುಂಡು ಮಾಡಿ ನೆಲಕ್ಕೆ ಎಸೆದಿದ್ದಾನೆ.
ಇದನ್ನು ನೋಡಿದ ವಾಹನದಲ್ಲಿ ಚಾಲಕನಾಗಿದ್ದ ಸುರೇಂದ್ರ ಕುಮಾರ್ ಅವರು ಸಹಾಯಕ್ಕೆ ಬಂದು ಸಮಾಧಾನ ಪಡಿಸಲು ಹೋದಾಗ ಅವರ ಹೊಟ್ಟೆಗೆ ಮತ್ತು ಸೊಂಟಕ್ಕೆ ಸುಲೈಮಾನ್ ಕಾಲಿನಿಂದ ಒದ್ದು ನೆಲಕ್ಕೆ ಬೀಳಿಸಿ ಕೈಯಿಂದ ಬೆನ್ನಿಗೆ ಮತ್ತು ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆಗ ಅಶೋಕ್ ಅವರು ಸಹಾಯಕ್ಕೆ ಹೋಗಿ ಬಿಡಿಸಿದ್ದಾರೆ. ಸುರೇಂದ್ರ ಕುಮಾರ್ ಅವರ ಹೊಟ್ಟೆ, ಸೊಂಟದ ಭಾಗ, ಬೆನ್ನು ಮತ್ತು ಕುತ್ತಿಗೆಗೆ ಗುದ್ದಿದ ಹಲ್ಲೆ ಮಾಡಿದ್ದಾನೆ.
ಸುಲೈಮಾನ್ ಮತ್ತೆ ಹಲ್ಲೆ ಮಾಡುವ ಉದ್ದೇಶದಿಂದ ಹತ್ತಿರದಲ್ಲಿ ಬೇರೆ ವಸ್ತುವಿಗೆ ಹುಡುಕಾಡುತ್ತಿದ್ದಾಗ ಆತನನ್ನು ಹಿಡಿದಿಟ್ಟು ಠಾಣೆಗೆ ಕರೆ ಮಾಡಿ ಸಹಾಯಕ್ಕೆ ಬರುವಂತೆ ಕೇಳಿಕೊಂಡಿದ್ದರು. ರಾತ್ರಿ ಕರ್ತವ್ಯದಲ್ಲಿದ್ದ ರಾಯಣ್ಣ ಮತ್ತು ಪುರುಷೋತ್ತಮ ಅವರು ಸ್ಥಳಕ್ಕೆ ಧಾವಿಸಿ, ಆತನನ್ನು ಹಿಡಿದು ಠಾಣೆಗೆ ಕರೆತಂದಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿ ಪೊಲೀಸ್ ಅಧಿಕಾರಿ ಸಿಬಂದಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ, ಹಲ್ಲೆ ನಡೆಸಿ, ಇಲಾಖಾ ಸೊತ್ತನ್ನು ತುಂಡು ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
A man was arrested in Mangaluru after allegedly assaulting police personnel on night patrol duty near a fast-food outlet in Naguri. The accused, identified as Sulaiman (42), a resident of Halasoge village in Sakleshpur, Hassan district, has been booked for assault, obstruction of duty, and damaging government property.
05-09-25 07:55 pm
Bangalore Correspondent
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am