ಬ್ರೇಕಿಂಗ್ ನ್ಯೂಸ್
06-09-25 04:46 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿ ನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕೂಡಲೇ ಒಂದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೆ, ನಮ್ಮ ಮಂಗಳೂರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
Following heavy rains in Mangaluru city, several roads under the Mangaluru City Corporation (MCC) limits have deteriorated severely, prompting MLA Vedavyas Kamath to direct civic officials to take immediate action to repair potholes and address related civic issues.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm