ಬ್ರೇಕಿಂಗ್ ನ್ಯೂಸ್
06-09-25 10:15 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.6 : ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಮೂಲದ ಬಗ್ಗೆ ಎಸ್ಐಟಿ ತನಿಖೆ ತೀವ್ರಗೊಳಿಸಿದ್ದು ಅದನ್ನು ಬಂಗ್ಲೆಗುಡ್ಡೆ ಕಾಡಿನಿಂದಲೇ ತರಲಾಗಿತ್ತು ಎನ್ನುವ ಬಲವಾದ ಅನುಮಾನ ಮೂಡಿದೆ. ದಿಢೀರ್ ಬೆಳವಣಿಗೆಯಲ್ಲಿ ದೂರುದಾರ ಚಿನ್ನಯ್ಯ ಪೊಲೀಸರಿಗೆ ನೀಡಿದ್ದ ಬುರುಡೆಯನ್ನು ಬಂಗ್ಲೆಗುಡ್ಡೆ ಕಾಡಿನಿಂದಲೇ ತರಲಾಗಿತ್ತು ಎನ್ನುವ ಮಾಹಿತಿ ಆಧರಿಸಿ ಎಸ್ಐಟಿ ಅಧಿಕಾರಿಗಳು ಇದೀಗ ಸೌಜನ್ಯಾ ಮಾವ ವಿಠಲ ಗೌಡರನ್ನು ಆ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ತಂದುಕೊಟ್ಟಿದ್ದಾಗಿ ಸಾಮಾಜಿಕ ಹೋರಾಟಗಾರ ಜಯಂತ್ ಹೇಳಿಕೆ ನೀಡಿದ್ದರು. ಇದರಂತೆ ಗಿರೀಶ್ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದು ಬುರುಡೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಇದರ ಬೆನ್ನಲ್ಲೇ ಸೌಜನ್ಯಾ ಮಾವ ವಿಠಲ ಗೌಡ ಅವರನ್ನು ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆದಿರುವುದರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆಯೇ ಎಂಬ ಅನುಮಾನವೂ ಇದೆ.
ಮಾಹಿತಿ ಪ್ರಕಾರ, ತಲೆಬುರುಡೆ ಸಂಗ್ರಹ ಸಂದರ್ಭದಲ್ಲಿ ಚಿನ್ನಯ್ಯನ ಜೊತೆ ಬಂಗ್ಲೆಗುಡ್ಡ ಕಾಡಿಗೆ ವಿಠಲ ಗೌಡ ಅವರೂ ತೆರಳಿದ್ದರು ಎನ್ನಲಾಗುತ್ತಿದೆ. ವಿಚಾರಣೆ ವೇಳೆ, ಚಿನ್ನಯ್ಯನ ಜೊತೆ ಕಾಡಿಗೆ ತೆರಳಿದ್ದು ಹೌದು. ಬುರುಡೆ ತೆಗೆದಿದ್ದು ಮಾತ್ರ ಚಿನ್ನಯ್ಯನೇ ಎಂದು ವಿಠಲಗೌಡ ಪೊಲೀಸರಿಗೆ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ವಿಠಲ ಗೌಡರನ್ನು ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದ ವಿಚಾರ ಧರ್ಮಸ್ಥಳ ಭಾಗದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದ್ದು ಚಿನ್ನಯ್ಯ ಬಳಿಕ ಬುರುಡೆ ಪ್ರಕರಣದಲ್ಲಿ ವಿಠಲ ಗೌಡರನ್ನು ಅರೆಸ್ಟ್ ಮಾಡುತ್ತಾರಾ ಎಂಬ ಶಂಕೆ ಮೂಡಿದೆ.
ಇದೇ ವೇಳೆ, ಆರೋಪಿ ಚಿನ್ನಯ್ಯನ 14 ದಿನಗಳ ಕಸ್ಟಡಿ ಅವಧಿ ಮುಗಿದಿದ್ದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಹಿತಿ ಇದೆ.
In a major development in the Dharmasthala case, the Special Investigation Team (SIT) has intensified its probe into the origin of the human skull submitted as evidence. Investigators now strongly suspect that the skull was brought from Banglegudde forest. On this basis, SIT officials took Vittal Gowda, uncle of victim Soujanya, to the forest location for questioning. Earlier, complainant Chinnayya had handed over the skull to the police. Sources suggest that Vittal Gowda may have accompanied Chinnayya when the skull was collected from the forest.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm