ಬ್ರೇಕಿಂಗ್ ನ್ಯೂಸ್
06-09-25 10:15 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.6 : ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಮೂಲದ ಬಗ್ಗೆ ಎಸ್ಐಟಿ ತನಿಖೆ ತೀವ್ರಗೊಳಿಸಿದ್ದು ಅದನ್ನು ಬಂಗ್ಲೆಗುಡ್ಡೆ ಕಾಡಿನಿಂದಲೇ ತರಲಾಗಿತ್ತು ಎನ್ನುವ ಬಲವಾದ ಅನುಮಾನ ಮೂಡಿದೆ. ದಿಢೀರ್ ಬೆಳವಣಿಗೆಯಲ್ಲಿ ದೂರುದಾರ ಚಿನ್ನಯ್ಯ ಪೊಲೀಸರಿಗೆ ನೀಡಿದ್ದ ಬುರುಡೆಯನ್ನು ಬಂಗ್ಲೆಗುಡ್ಡೆ ಕಾಡಿನಿಂದಲೇ ತರಲಾಗಿತ್ತು ಎನ್ನುವ ಮಾಹಿತಿ ಆಧರಿಸಿ ಎಸ್ಐಟಿ ಅಧಿಕಾರಿಗಳು ಇದೀಗ ಸೌಜನ್ಯಾ ಮಾವ ವಿಠಲ ಗೌಡರನ್ನು ಆ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ತಂದುಕೊಟ್ಟಿದ್ದಾಗಿ ಸಾಮಾಜಿಕ ಹೋರಾಟಗಾರ ಜಯಂತ್ ಹೇಳಿಕೆ ನೀಡಿದ್ದರು. ಇದರಂತೆ ಗಿರೀಶ್ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದು ಬುರುಡೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಇದರ ಬೆನ್ನಲ್ಲೇ ಸೌಜನ್ಯಾ ಮಾವ ವಿಠಲ ಗೌಡ ಅವರನ್ನು ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆದಿರುವುದರಿಂದ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆಯೇ ಎಂಬ ಅನುಮಾನವೂ ಇದೆ.
ಮಾಹಿತಿ ಪ್ರಕಾರ, ತಲೆಬುರುಡೆ ಸಂಗ್ರಹ ಸಂದರ್ಭದಲ್ಲಿ ಚಿನ್ನಯ್ಯನ ಜೊತೆ ಬಂಗ್ಲೆಗುಡ್ಡ ಕಾಡಿಗೆ ವಿಠಲ ಗೌಡ ಅವರೂ ತೆರಳಿದ್ದರು ಎನ್ನಲಾಗುತ್ತಿದೆ. ವಿಚಾರಣೆ ವೇಳೆ, ಚಿನ್ನಯ್ಯನ ಜೊತೆ ಕಾಡಿಗೆ ತೆರಳಿದ್ದು ಹೌದು. ಬುರುಡೆ ತೆಗೆದಿದ್ದು ಮಾತ್ರ ಚಿನ್ನಯ್ಯನೇ ಎಂದು ವಿಠಲಗೌಡ ಪೊಲೀಸರಿಗೆ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ವಿಠಲ ಗೌಡರನ್ನು ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದ ವಿಚಾರ ಧರ್ಮಸ್ಥಳ ಭಾಗದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದ್ದು ಚಿನ್ನಯ್ಯ ಬಳಿಕ ಬುರುಡೆ ಪ್ರಕರಣದಲ್ಲಿ ವಿಠಲ ಗೌಡರನ್ನು ಅರೆಸ್ಟ್ ಮಾಡುತ್ತಾರಾ ಎಂಬ ಶಂಕೆ ಮೂಡಿದೆ.
ಇದೇ ವೇಳೆ, ಆರೋಪಿ ಚಿನ್ನಯ್ಯನ 14 ದಿನಗಳ ಕಸ್ಟಡಿ ಅವಧಿ ಮುಗಿದಿದ್ದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಹಿತಿ ಇದೆ.
In a major development in the Dharmasthala case, the Special Investigation Team (SIT) has intensified its probe into the origin of the human skull submitted as evidence. Investigators now strongly suspect that the skull was brought from Banglegudde forest. On this basis, SIT officials took Vittal Gowda, uncle of victim Soujanya, to the forest location for questioning. Earlier, complainant Chinnayya had handed over the skull to the police. Sources suggest that Vittal Gowda may have accompanied Chinnayya when the skull was collected from the forest.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm