ಬ್ರೇಕಿಂಗ್ ನ್ಯೂಸ್
08-09-25 12:08 pm Udupi Correspondent ಕರಾವಳಿ
ಉಡುಪಿ, ಸೆ 08 : ಸಮುದ್ರಕ್ಕೆ ಈಜಲು ಹೋದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್ನಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.


ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದರು. ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮುಳುಗು ತಜ್ಞ ಈಶ್ವರ್ ಮಲ್ಪೆ, ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಓರ್ವನನ್ನು ರಕ್ಷಣೆ ಮಾಡಿದ್ದೇವೆ. ಪ್ರಾರಂಭದಲ್ಲಿ ಇಬ್ಬರು ಸಾವಿಗೀಡಾಗಿ ಓರ್ವ ಕಣ್ಮರೆಯಾಗಿದ್ದ. ಬಳಿಕ ಆತನ ಮೃತದೇಹ ಸಿಕ್ಕಿತು. ರಕ್ಷಣೆ ಮಾಡಲ್ಪಟ್ಟ ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ವಾರಾಂತ್ಯದ ರಜೆಯ ಮೋಜು ಕಳೆಯಲೆಂದು ಬೆಂಗಳೂರಿನ ಪಿ.ಎಸ್. ಹಾಗೂ ಇತರ ಕಾಲೇಜಿನ ಒಟ್ಟು 10 ವಿದ್ಯಾರ್ಥಿಗಳು ಒಟ್ಟಾಗಿ ರೈಲಿನ ಮೂಲಕ ಶುಕ್ರವಾರ ಬೆಂಗಳೂರಿನಿಂದ ಉಡುಪಿಗೆ ಬಂದಿದ್ದರು. ಶನಿವಾರ ಸಂಜೆ ವೇಳೆಗೆ ಕುಂಭಾಸಿಗೆ ಬಂದಿದ್ದ ವಿದ್ಯಾರ್ಥಿಗಳ ತಂಡ, ಖಾಸಗಿ ಲಾಡ್ಜ್ನಲ್ಲಿತಂಗಿದ್ದರು. ಭಾನವಾರ ಬೆಳಗ್ಗೆ 7.30 ರ ವೇಳೆಗೆ ನಾಲ್ಕೈದು ವಿದ್ಯಾರ್ಥಿಗಳು ಮೊಬೈಲ್ ಲೊಕೇಶನ್ ಬಳಸಿ ಕಾಲ್ನಡಿಗೆಯಲ್ಲಿಯೇ ಸಮೀಪದ ಗೋಪಾಡಿಯ ಚರ್ಕಿಕಡು ಅರಬ್ಬಿ ಸಮುದ್ರ ಕಿನಾರೆಗೆ ಬಂದಿದ್ದರು. ಬಳಿಕ ವಸತಿಗೃಹದಲ್ಲಿತಂಗಿದ್ದ ಉಳಿದ ಸಂಗಡಿಗರನ್ನೂ ಅಲ್ಲಿಗೆ ಕರೆಸಿಕೊಂಡಿದ್ದರು.
ಒಬ್ಬ ವಿದ್ಯಾರ್ಥಿಯನ್ನು ಬಿಟ್ಟು ಉಳಿದ 9 ಮಂದಿ ವಿದ್ಯಾರ್ಥಿಗಳು ಸಮುದ್ರದಲ್ಲಿನೀರಿನಾಟದಲ್ಲಿನಿರತರಾಗಿದ್ದರು. ಭಾನುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ವಿದ್ಯಾರ್ಥಿಗಳ ಬೊಬ್ಬೆ ಕೇಳಿ ಸ್ಥಳೀಯ ಮೀನುಗಾರ ಉಮೇಶ್ ಎನ್ನುವವರು ಕಡಲ ಕಿನಾರೆಗೆ ಧಾವಿಸಿ ಬಂದಾಗ ಕೆಲವು ವಿದ್ಯಾರ್ಥಿಗಳು ನೀರುಪಾಲಾಗುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ನಿರೂಪ್ (20) ಹಾಗೂ ಇನ್ನೊಬ್ಬನನ್ನು ರಕ್ಷಣೆ ಮಾಡಿ ದಡಕ್ಕೆ ಸೇರಿಸಿದ್ದಾರೆ. ಬಳಿಕ ಸ್ಥಳೀಯ ಇತರರನ್ನು ಕರೆಸಿ ರಕ್ಷಣಾ ಕಾರ್ಯಕ್ಕೆ ಮುಂದಾದರೂ ಮೂವರು ವಿದ್ಯಾರ್ಥಿಗಳು ಸಮುದ್ರದ ನೀರಿನಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ.
ಸಮುದ್ರದ ಅಲೆಗಳಲ್ಲಿ ಮೋಜಿನಾಟದಲ್ಲಿನಿರತರಾಗಿದ್ದ ವಿದ್ಯಾರ್ಥಿಗಳಿಗೆ ಸ್ಥಳೀಯರು ಸಮುದ್ರದ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿ ಮೋಜಿನಾಟದಲ್ಲಿನಿರತರಾಗಿದ್ದುದೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಶಾಸಕರ ಭೇಟಿ;
ದುರಂತದ ಮಾಹಿತಿ ಪಡೆದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸ್ಥಳಕ್ಕೆ ಆಗಮಿಸಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಪೊಲೀಸ್ ಅಕಾರಿಗಳೊಂದಿಗೆ ಮುಂದಿನ ಕಾನೂನು ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.
Sept 8 – A tragic incident unfolded at Gopadi Beach in Kundapura on Sunday, where three students drowned while swimming in the sea, despite prior warnings from locals. A fourth student was rescued in critical condition and is currently receiving treatment at Manipal Hospital. A group of 10 students fromvarious colleges in Bengaluru had arrived in Gopadi on Friday by train, hoping to enjoy a weekend getaway.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm