ಬ್ರೇಕಿಂಗ್ ನ್ಯೂಸ್
09-09-25 08:01 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಕುಳೂರಿನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿಯಾದ ಘಟನೆ ಸಂಬಂಧಿಸಿ ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಹೆದ್ದಾರಿ ಗುಂಡಿ ಮುಚ್ಚದೆ ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾಧವಿ (44) ಎಂಬವರು ಚಿತ್ರಾಪುರದ ತನ್ನ ಮನೆಯಿಂದ ಬೆಳಗ್ಗೆ 8.30ರ ವೇಳೆಗೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುಳೂರಿನ ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ, ಮೀನು ಸಾಗಾಟದ ಈಚರ್ ಲಾರಿ ಹಿಂದಿನಿಂದ ಅತಿ ವೇಗದಲ್ಲಿ ಬಂದಿದ್ದು ರಸ್ತೆಗೆ ಬಿದ್ದ ಮಹಿಳೆಯ ಮೇಲಿನಿಂದ ಸಾಗಿದೆ. ಮಹಿಳೆ ರಸ್ತೆಯಲ್ಲೇ ದಾರುಣವಾಗಿ ಸಾವು ಕಂಡಿದ್ದರು.



ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದರೂ ನಿರ್ಲಕ್ಷ್ಯ ವಹಿಸಿರುವ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಮತ್ತು ಜನಪ್ರತಿನಿಧಿಗಳ ಬಗ್ಗೆಯೂ ಆಕ್ರೋಶ ಕೇಳಿಬಂದಿತ್ತು. ಅಪಘಾತ ಪಡಿಸಿದ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ನನ್ನ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯ ಮಾಡಲಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ರಸ್ತೆ ಗುಂಡಿಗಳನ್ನು ಮುಚ್ಚದೆ ನಿರ್ಲಕ್ಷ್ಯ ವಹಿಸಿ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿರುದ್ಧ ಹಾಗೂ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಮೇಲೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕಲಂ 281, 106(1) ಬಿಎನ್ಎಸ್ ಮತ್ತು 198 (ಎ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
In a shocking incident at Kuloor, a woman lost her life after falling off her scooter due to a pothole, following which a speeding truck ran over her. The police have registered a case not only against the truck driver but also against officials of the National Highways Authority of India (NHAI) for negligence.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm