ಬ್ರೇಕಿಂಗ್ ನ್ಯೂಸ್
09-09-25 08:01 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಕುಳೂರಿನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿಯಾದ ಘಟನೆ ಸಂಬಂಧಿಸಿ ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಹೆದ್ದಾರಿ ಗುಂಡಿ ಮುಚ್ಚದೆ ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾಧವಿ (44) ಎಂಬವರು ಚಿತ್ರಾಪುರದ ತನ್ನ ಮನೆಯಿಂದ ಬೆಳಗ್ಗೆ 8.30ರ ವೇಳೆಗೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುಳೂರಿನ ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ, ಮೀನು ಸಾಗಾಟದ ಈಚರ್ ಲಾರಿ ಹಿಂದಿನಿಂದ ಅತಿ ವೇಗದಲ್ಲಿ ಬಂದಿದ್ದು ರಸ್ತೆಗೆ ಬಿದ್ದ ಮಹಿಳೆಯ ಮೇಲಿನಿಂದ ಸಾಗಿದೆ. ಮಹಿಳೆ ರಸ್ತೆಯಲ್ಲೇ ದಾರುಣವಾಗಿ ಸಾವು ಕಂಡಿದ್ದರು.



ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದರೂ ನಿರ್ಲಕ್ಷ್ಯ ವಹಿಸಿರುವ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಮತ್ತು ಜನಪ್ರತಿನಿಧಿಗಳ ಬಗ್ಗೆಯೂ ಆಕ್ರೋಶ ಕೇಳಿಬಂದಿತ್ತು. ಅಪಘಾತ ಪಡಿಸಿದ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ನನ್ನ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯ ಮಾಡಲಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ರಸ್ತೆ ಗುಂಡಿಗಳನ್ನು ಮುಚ್ಚದೆ ನಿರ್ಲಕ್ಷ್ಯ ವಹಿಸಿ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿರುದ್ಧ ಹಾಗೂ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಮೇಲೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕಲಂ 281, 106(1) ಬಿಎನ್ಎಸ್ ಮತ್ತು 198 (ಎ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
In a shocking incident at Kuloor, a woman lost her life after falling off her scooter due to a pothole, following which a speeding truck ran over her. The police have registered a case not only against the truck driver but also against officials of the National Highways Authority of India (NHAI) for negligence.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm