ಬ್ರೇಕಿಂಗ್ ನ್ಯೂಸ್
11-09-25 01:40 pm Mangalore Correspondent ಕರಾವಳಿ
ಪುತ್ತೂರು, ಸೆ.11 : ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕಾರ್ಯಕರ್ತರ ನಡುವಿನ ಅಸಮಾಧಾನ ಮತ್ತೆ ಹೊಗೆಯಾಡಿದೆ. ಪಕ್ಷದಲ್ಲಿ ವಿಲೀನ ಮಾಡಿದರೂ, ಪ್ರಮುಖ ಹುದ್ದೆ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವು ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಪ್ರಮುಖರು ಮತ್ತು ಪುತ್ತಿಲ ಪರಿವಾರ ಟ್ರಸ್ಟ್ ಪ್ರಮುಖರು, ಕಾರ್ಯಕರ್ತರ ಸಭೆ ಪುತ್ತೂರಿನಲ್ಲಿ ನಡೆಯಿತು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಬಿಜೆಪಿ ಪದಾಧಿಕಾರಿಗಳಾಗಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆಯು ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂದರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ ಭರವಸೆ ಈಡೇರಿಸದಿರುವುದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಕೆರಳಿಸಿದೆ.
ಕೇಸರಿ ಶಾಲನ್ನು ಹಾಕುವ ದೇವ ದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ತಕ್ಷಣ ಪಕ್ಷದ ಮತ್ತು ಸಂಘದ ಹಿರಿಯರು ಸಮನ್ವಯ ಸಾಧಿಸಿ ಪರಿಹಾರ ಮಾಡಬೇಕೆಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ಕೆಲಸ ಕಾರ್ಯಗಳ ಬಗ್ಗೆಯೂ ಚರ್ಚೆಗಳು ನಡೆದು ಟ್ರಸ್ಟಿನ ಅಧ್ಯಕ್ಷರು ಮತ್ತು ತಂಡ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ದರಾಗಿರುವುದಾಗಿ ತಿಳಿಸಿದರು. ಸಂಘದ ಶತಾಬ್ದಿಯ ನಿಮಿತ್ತ ನವಂಬರ್ ತಿಂಗಳಿನಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ
ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ನಿರ್ಣಯಿಸಲಾಯಿತು.
Fresh dissatisfaction has surfaced between the BJP and Puthila Parivara workers, with party cadres expressing anger over unfulfilled promises and lack of recognition. Although the group merged with the BJP, senior leaders allege that no key positions have been offered, leaving workers frustrated.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm