ಬ್ರೇಕಿಂಗ್ ನ್ಯೂಸ್
12-09-25 11:32 am Mangalore Correspondent ಕರಾವಳಿ
ಮಂಗಳೂರು, ಸೆ.12 : ಗುಂಡಿ ಬಿದ್ದ ಹೆದ್ದಾರಿಗಳಿಗೆ ತುರ್ತಾಗಿ ಕಾಯಕಲ್ಪ ನೀಡಲು ಸಂಸದ ಬ್ರಿಜೇಶ್ ಚೌಟ ಮುಂದಾಗಿದ್ದು, ತುರ್ತು ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಸುರತ್ಕಲ್- ಬಿಸಿ ರೋಡ್ ನಡುವಿನ 33 ಕಿಮೀ ಉದ್ದದ ಹೆದ್ದಾರಿಯನ್ನು ಸಂಪೂರ್ಣ ಮರು ಡಾಮರೀಕರಣ, ಸರ್ವಿಸ್ ರಸ್ತೆ, ಆಯಕಟ್ಟಿನ ಜಂಕ್ಷನ್ ಇರುವಲ್ಲಿ ತಿರುವುಗಳನ್ನು ಸರಿಪಡಿಸುವ ಕಾರ್ಯಕ್ಕೆ 28 ಕೋಟಿ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಆಗಿದೆ. ಮಳೆಯ ಕಾರಣಕ್ಕೆ ಕಾಮಗಾರಿ ವಿಳಂಬ ಆಗಿತ್ತು. ತಕ್ಷಣವೇ ಕೆಲಸ ಕೈಗೆತ್ತಿಕೊಂಡು ಆರು ತಿಂಗಳಲ್ಲಿ ಮುಗಿಸುವಂತೆ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
ಹೆದ್ದಾರಿ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಟ್ಟಿನಲ್ಲಿ ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಜೊತೆಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆಗೆ ಸಂಸದ ಚೌಟ ಸಭೆ ನಡೆಸಿದ್ದು, ಹೆದ್ದಾರಿ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ, ಮಹಾನಗರ ಪಾಲಿಕೆ ಎಂಜಿನಿಯರ್ ನರೇಶ್ ಶೆಣೈ, ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ಶ್ರೀಮತಿ ನಜ್ಮಾ ಫಾರೂಕಿ, ಗುತ್ತಿಗೆದಾರ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಈಗಾಗಲೇ ಸುರತ್ಕಲ್ – ಬಿಸಿ ರೋಡ್ ಹೆದ್ದಾರಿಯನ್ನು ಎನ್ಎಂಪಿಟಿಯಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಪಡೆದುಕೊಳ್ಳಲು ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಬೇಡಿಕೆ ಇಟ್ಟಿದ್ದು, ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರ ಜೊತೆಗೆ ಈ ಹೆದ್ದಾರಿ ಅತಿ ಹೆಚ್ಚು ವಾಹನಗಳು ಸಂಚರಿಸುವ ರಸ್ತೆಯಾಗಿರುವುದು ಮತ್ತು ಏರ್ಪೋರ್ಟ್, ಬಂದರು ಸಂಪರ್ಕದ ರಸ್ತೆಯಾಗಿದ್ದರಿಂದ ಇದಕ್ಕೊಂದು ಬೈಪಾಸ್ ರಸ್ತೆ ಮಾಡುವುದು ಹಾಗೂ ಒಟ್ಟು ಈ ರಸ್ತೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಇಲಾಖೆ ಸಚಿವರಿಗೆ ಮನವಿ ನೀಡಿದ್ದೇನೆ. ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು, ವಿಸ್ತೃತ ಯೋಜನಾ ವರದಿ ತಯಾರಿಸಲು ಅನುಮತಿ ದೊರೆತಿದೆ. ಸದ್ಯಕ್ಕೆ ತುರ್ತಾಗಿ ದುರಸ್ತಿ ಕಾರ್ಯ, ಆಬಳಿಕ ಈ ಹೆದ್ದಾರಿಯ ಉದ್ದಕ್ಕೂ ಅಗತ್ಯ ಇರುವಲ್ಲಿ ಸರ್ವಿಸ್ ರಸ್ತೆ ಮತ್ತು ಹೆಚ್ಚು ಗುಂಡಿ ಬೀಳುವಲ್ಲಿ ಕಾಂಕ್ರೀಟ್ ಹಾಕಿ, ಪೊಲೀಸರು ಮತ್ತು ಹೆದ್ದಾರಿ ಪ್ರಾಧಿಕಾರ ಸಮನ್ವಯದಿಂದ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಚೌಟ ಸೂಚಿಸಿದರು.
ನಂತೂರು ವೃತ್ತದಲ್ಲಿ ಸಿಗ್ನಲ್ ವ್ಯವಸ್ಥೆ ಮಾಡಲು ಯಾಕೆ ಸಾಧ್ಯವಾಗಲ್ಲ ಎಂದು ಟ್ರಾಫಿಕ್ ಎಸಿಪಿ ಅವರಲ್ಲಿ ಸಂಸದ ಚೌಟ ಪ್ರಶ್ನೆ ಮಾಡಿದರು. ನಂತೂರು ವೃತ್ತ ಏರು ತಗ್ಗು ಇರುವುದರಿಂದ ಸಿಗ್ನಲ್ ವ್ಯವಸ್ಥೆ ಪೂರಕವಾಗಿಲ್ಲ. ವಾಹನಗಳು ಸರಾಗ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಹೇಳಿದರು. ವೇದವ್ಯಾಸ್ ಪ್ರತಿಕ್ರಿಯಿಸಿ, ಕೆಲವು ನಗರಗಳಲ್ಲಿ ಐದು ರಸ್ತೆ ಒಂದೇ ಕಡೆ ಸೇರುವುದಿದ್ದರೂ ಸಿಗ್ನಲ್ ವ್ಯವಸ್ಥೆ ಇರುತ್ತದೆ. ಇದನ್ನು ಯಾಕೆ ಆ ರೀತಿ ಮಾಡಲಾಗದು ಎಂದು ಪ್ರಶ್ನಿಸಿದರು.
ಹೆದ್ದಾರಿ ಬದಿಯಲ್ಲಿ ಗೂಡಂಗಡಿ, ಮೀನು ಮಾರಾಟಕ್ಕೆ ಅವಕಾಶ ನೀಡಬಾರದು, ಇದರಿಂದ ಟ್ರಾಫಿಕ್ ತೊಂದರೆಯಾಗುತ್ತದೆ ಎಂದು ಸಂಸದರು ಪೊಲೀಸರಿಗೆ ಸೂಚನೆ ನೀಡಿದರು. ಇದಕ್ಕೆ ಶಾಸಕ ಕಾಮತ್, ಹೆದ್ದಾರಿ ಬದಿಯಲ್ಲಿ ಯಾವುದೇ ರೀತಿ ಅತಿಕ್ರಮ ಇದ್ದರೂ ಪಾಲಿಕೆಯಲ್ಲಿ ಮಾಡಿದ ರೀತಿ ಟೈಗರ್ ಕಾರ್ಯಾಚರಣೆ ನಡೆಸಿ, ಪೊಲೀಸರನ್ನು ಜೊತೆಗೆ ಸೇರಿಸಿಕೊಂಡು ಈ ಕೆಲಸ ಮಾಡುವಂತೆ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
To address the worsening condition of highways in Dakshina Kannada, MP Brijesh Chowta has directed officials to immediately take up urgent repair works and complete them within six months.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm