ಬ್ರೇಕಿಂಗ್ ನ್ಯೂಸ್
14-09-25 10:55 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.14 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿರುವಾಗಲೇ ಸೌಜನ್ಯಾಳನ್ನು ಆಕೆಯ ಮಾವ ವಿಠಲ ಗೌಡನೇ ಕೊಲೆ ಮಾಡಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದ ಮೈಸೂರಿನ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಇಂದಬೆಟ್ಟು ಗ್ರಾಮದ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ, ವಿಠಲ ಗೌಡನ ಬಗ್ಗೆ ಅನುಮಾನ ಇದೆ. ಆತನೇ ಸೌಜನ್ಯಾಳನ್ನು ಕೊಲೆಗೈದಿರುವ ಶಂಕೆಯಿದೆ ಎಂದು ಹೇಳಿ ಹಲವು ಅನುಮಾನಗಳನ್ನು ಪಟ್ಟಿ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಮಾಧ್ಯಮಕ್ಕೂ ಅದೇ ರೀತಿಯ ಹೇಳಿಕೆ ನೀಡಿದ್ದರು. 12 ವರ್ಷಗಳ ಬಳಿಕ ಈ ರೀತಿಯ ಆರೋಪ ಮಾಡಿ ಸೌಜನ್ಯಾ ಪರ ಹೋರಾಟದ ಕಿಚ್ಚನ್ನು ಕುಂದಿಸುವ ಯತ್ನ ಮಾಡಿದ್ದರು.
ಇದೀಗ ಸ್ನೇಹಮಯಿ ವಿರುದ್ಧವೇ ಪೊಲೀಸರಿಗೆ ದೂರು ಕೊಟ್ಟಿದ್ದು, ಈ ರೀತಿ ದೂರು ಕೊಟ್ಟು ಸೌಜನ್ಯಾ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ಯತ್ನ ಮಾಡಿದ್ದಾರೆ. ಪಿತೂರಿ, ದುರುದ್ದೇಶ ಇಟ್ಟುಕೊಂಡು ದೂರು ನೀಡಿದ್ದಾರೆ. ಅವರನ್ನು ಠಾಣೆಗೆ ಕರೆಸಿ ಕೂಲಂಕಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ವೆಂಕಪ್ಪ ಕೋಟ್ಯಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾಳನ್ನು 2012ರ ಅಕ್ಟೋಬರ್ 9ರಂದು ಸಂಜೆ ವೇಳೆಗೆ ಅಪಹರಿಸಿ ಅತ್ಯಾಚಾರಗೈದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಶವ ಮರುದಿನ ಬೆಳಗ್ಗೆ ಮಣ್ಣಸಂಕ ಎಂಬಲ್ಲಿನ ಕಾಡಿನಲ್ಲಿ ಪತ್ತೆಯಾಗಿತ್ತು.
ಇದೀಗ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಆರೋಪದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದ್ದು ಅಧಿಕಾರಿಗಳು ಘಟನೆ ಬಗ್ಗೆ ಹಲವು ಆಯಾಮದಲ್ಲಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಳೆದೊಂದು ವಾರದಿಂದ ಗಿರೀಶ್ ಮಟ್ಟಣ್ಣವರ್, ಜಯಂತ ಟಿ., ವಿಠಲ ಗೌಡ, ಪ್ರದೀಪ್ ಗೌಡ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರ ವಿಚಾರಣೆ ನಡೆಸಲಾಗಿದೆ. ವಿಠಲ ಗೌಡ ಜೊತೆಗೆ ಕಾಡಿನಿಂದ ತಲೆಬುರುಡೆ ತಂದಿದ್ದ ಎನ್ನಲಾದ ಪ್ರದೀಪ್ ಗೌಡ ಕೋರ್ಟಿನಲ್ಲಿ ಸಾಕ್ಷಿ ಹೇಳಿಕೆಯನ್ನೂ ನೀಡಿದ್ದಾರೆ.
In a surprising twist in the ongoing investigation into the Sowjanya murder case, a police complaint has been filed against Mysuru-based social activist Snehamayi Krishna, who had recently accused Sowjanya’s uncle Vittal Gowda of being involved in the crime.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm