ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm