Mangalore, Ullal News, Boat: ಕೈಕೊಟ್ಟ ಇಂಜಿನ್ ;  ಉಳ್ಳಾಲ ತೀರದ ಕಲ್ಲು ಬಂಡೆಗೆ ಬಡಿದು ಪಲ್ಟಿ ಹೊಡೆದ ಮೀನುಗಾರಿಕಾ ಬೋಟ್, ಈಜಿ ಪ್ರಾಣ ರಕ್ಷಿಸಿಕೊಂಡ 13 ಮಂದಿ ಮೀನುಗಾರರು, ಬೋಟ್ ಗೆ ಸಂಪೂರ್ಣ ಹಾನಿ, ಕೋಟಿಗೂ ಮೀರಿ ನಷ್ಟ 

15-09-25 11:27 am       Mangalore Correspondent   ಕರಾವಳಿ

ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ.

ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.

ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.