ಬ್ರೇಕಿಂಗ್ ನ್ಯೂಸ್
18-09-25 09:09 pm Mangalore Correspondent ಕರಾವಳಿ
ಮಂಗಳೂರು, ಸೆ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಅದಕ್ಕೆ ಹೊಣೆಗಾರರನ್ನಾಗಿಸಿ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ, ಅಧಿಕಾರಿಗಳು ವಿನಾಕಾರಣ ವಿಳಂಬಿಸಿರುವುದು ಲೋಕಾಯುಕ್ತ ಕಾಯ್ದೆಯಡಿ "ದುರಾಡಳಿತ" ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ಸರ್ಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ್ವಯ ನಿವೃತ್ತ ಯೋಧರಿಗೆ, ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಅವಲಂಬಿತರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ, ದೂರಿನಲ್ಲಿ ಹಿತಾಸಕ್ತಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಮಂಗಳೂರು ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
The Lokayukta has registered a suo motu complaint against all Tahsildars and Sub-Divisional Officers (SDOs) in Dakshina Kannada district for allegedly neglecting to provide government benefits due to soldiers, ex-servicemen, freedom fighters, and their dependents.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm