ಬ್ರೇಕಿಂಗ್ ನ್ಯೂಸ್
18-09-25 09:12 pm Mangalore Correspondent ಕರಾವಳಿ
ಉಳ್ಳಾಲ, ಸೆ.18 : ಸಕಾರಾತ್ಮಕ ಚಿಂತನೆ ಇರುವವರು ನಾನು ನಡೆಸಿರುವ ಸಭೆ ಹಾಗೂ ಸುದ್ಧಿಗೋಷ್ಠಿಯನ್ನು ಸಕಾರಾತ್ಮಕವಾಗಿಯೇ ಸ್ವೀಕರಿಸುತ್ತಾರೆಯೇ ಹೊರತು ಅದೇ ವಿಚಾರವನ್ನ ಮುಂದಿಟ್ಟು ನಕಾರಾತ್ಮಕವಾಗಿ ಮಾತನಾಡುವವರಿಗೆ ಏನೂ ಮಾಡಲಾಗದು. ಅದು ಅವರ ಪ್ರಬುದ್ಧತೆಯನ್ನ ಪ್ರದರ್ಶಿಸುತ್ತದೆ. ನಾನು ವಿಧಾನಸಭೆಯ ಸಭಾಧ್ಯಕ್ಷನಾಗಿದ್ದರೂ ನನ್ನ ಕ್ಷೇತ್ರ ಮತ್ತು ಜಿಲ್ಲೆಗೆ ಜನಸೇವಕನಾಗಿ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆಂದು ಸ್ಪೀಕರ್ ಯು.ಟಿ.ಖಾದರ್ ಬಿಜೆಪಿ ಟೀಕೆಗೆ ಟಾಂಗ್ ನೀಡಿದ್ದಾರೆ.
ಯು.ಟಿ ಖಾದರ್ ಅವರು ಸ್ಪೀಕರಾ ಅಥವಾ ಜಿಲ್ಲೆಯ ಉಸ್ತುವಾರಿ ಸಚಿವರೇ..? ಇದುವರೆಗೆ ಯಾವುದೇ ಸ್ಪೀಕರ್ ಗಳು ಆಡಳಿತಾತ್ಮಕ ವಿಚಾರದಲ್ಲಿ ಸಭೆ ನಡೆಸಿರಲಿಲ್ಲ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಟೀಕೆಗೆ ಸ್ಪೀಕರ್ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ಸೋಮೇಶ್ವರ, ಉಚ್ಚಿಲದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಅಯೋಗವು ಸಾಂವಿಧಾನಿಕ ಸ್ವತಂತ್ರ ಸಂಸ್ಥೆಯಾಗಿದೆಯೇ ಹೊರತು ಅದು ಸರ್ಕಾರದ ಅಧೀನದಲ್ಲಿಲ್ಲ. ಆಯೋಗವು ಜಾತಿ ಗಣತಿಗೆ ಮುಂದಾಗಿದ್ದು ಅದಕ್ಕೆ ಸಹಕಾರ ನೀಡುವುದು ಸರ್ಕಾರದ ಜವಾಬ್ದಾರಿ. ಈ ಬಗ್ಗೆ ಜನರಲ್ಲಿರುವ ಗೊಂದಲಗಳನ್ನ ಮೊದಲೇ ಬಗೆಹರಿಸಬೇಕೆನ್ನುವ ನಿಟ್ಟಿನಲ್ಲಿ ಎಲ್ಲಾ ವರ್ಗದ ಜನರ ಜೊತೆ ಕುಳಿತು ಚರ್ಚಿಸಿ ಗೊಂದಲಗಳನ್ನ ಬಗೆಹರಿಸಲು ಪ್ರಯತ್ನಿಸಿದರೆ ಬೇರೆಯವರಿಗೆ ಆಗುವ ತೊಂದರೆ ಏನೆಂದು ಪ್ರಶ್ನಿಸಿದರು.
ಕೆಂಪು ಕಲ್ಲಿಗೆ ಹೊಸ ನಿಯಮ ಜಾರಿ
ಇಲ್ಲಿಯವರೆಗೆ ಕೆಂಪು ಕಲ್ಲು ವ್ಯಾಪಾರಿಗಳು ಮತ್ತು ಕೆಲಸಗಾರರು ಅಧಿಕಾರಿಗಳ ಭಯ ಮತ್ತು ನಿಯಂತ್ರಣದಲ್ಲೇ ಕೆಲಸ ಮಾಡುತ್ತಿದ್ದರು. ಸರಕಾರ ಇದನ್ನ ಮನಗಂಡು ಕೆಂಪುಕಲ್ಲು ವ್ಯಾಪಾರಸ್ಥರು ಮತ್ತು ಕೆಲಸಗಾರರು ಸ್ವಾಭಿಮಾನ ಮತ್ತು ದೈರ್ಯದಿಂದ ವ್ಯಾಪಾರ ಮಾಡಬೇಕೆನ್ನುವ ನಿಟ್ಟಿನಲ್ಲಿ ಈ ಹಿಂದಿನ ಎಲ್ಲಾ ನಿಯಮಗಳನ್ನ ಸಡಿಲಿಸಿದ್ದು ಅದೀಗ ಹೊಸ ನಿಯಮವಾಗಿ ಜಾರಿಗೊಳ್ಳುತ್ತಿದೆ. ಇದರಿಂದ ವ್ಯಾಪಾರಿಗಳಿಗೆ ಎಲ್ಲಾ ರೀತಿಯ ಪ್ರಯೋಜನ ದೊರಕಲಿದೆ. ಅಲ್ಲದೆ ಜನರಿಗೂ ಕೆಂಪುಕಲ್ಲು ಕಡಿಮೆ ದರದಲ್ಲಿ ಸಿಗುವ ವಿಶ್ವಾಸ ಇದೆಯೆಂದು ಖಾದರ್ ಹೇಳಿದರು.
Karnataka Legislative Assembly Speaker U.T. Khader has responded sharply to BJP leaders’ criticism, stating that while he may hold the position of Speaker, he continues to serve as a public representative committed to addressing people’s issues.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm