ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm