ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm