ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm