ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm