ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm