ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm