ಬ್ರೇಕಿಂಗ್ ನ್ಯೂಸ್
25-09-25 07:29 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ ಇದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿ ಎಸ್ ಟಿ ಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿ ಎಸ್ ಟಿ ಗೂ ಹಲವಾರು ವ್ಯತ್ಯಾಸಗಳಿದ್ದವು ಎಂದರು.
ಮುಂದೆ ಬಿಹಾರ ಸೇರಿದಂತೆ ಇತರೇ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್ ಟಿಯನ್ನು ಕಡಿಮೆ ಮಾಡಿದ್ದಾರೆ ಎಂದು ಅವರು ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್, ಚಿತ್ತರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
MLC Manjunath Bhandari questioned the BJP-led central government’s decision to celebrate the reduction in GST rates, pointing out that it was the same government that had initially imposed heavy taxes.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm