ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm