ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm