ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm