ಬ್ರೇಕಿಂಗ್ ನ್ಯೂಸ್
03-10-25 11:07 pm Mangalore Correspondent ಕರಾವಳಿ
ಮಂಗಳೂರು, ಅ.3 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.
ನಾಲ್ಕು ದಿನಗಳ ಪರ್ಯಂತ ಶ್ರೀ ದೇವಿಯ ಮೃತಿಕಾ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ ಪ್ರತಿದಿನ ಮಾತೆಯ ವಿಗ್ರಹಕ್ಕೆ ವಿಶೇಷ ಸರಸ್ವತಿ , ದುರ್ಗಾ, ಚಂಡಿಕಾ ದೇವಿ ಅಲಂಕಾರದೊಂದಿಗೆ ಅಲಂಕರಿಸಿ ಕೊನೆಯ ದಿನಂದಂದು ಶಾರದಾ ಮಾತೆಯ ಅಲಂಕಾರದಿಂದ ಶೃಂಗರಿಸಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವಿಶೇಷ ಹರಕೆಯ ಹುಲಿ ವೇಷಧಾರಿಗಳಿಂದ ಹುಲಿವೇಷ ನರ್ತನ ಸೇವೆ, ಕೇರಳದ ಸುಪ್ರಸಿದ್ದ ಚೆಂಡೆ ವಾದನ, ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು.







ದೇವಳದ ಸ್ವಯಂಸೇವಕರಿಂದ ಶಾರದಾ ಮಾತೆಯ ವಿಗ್ರಹಕ್ಕೆ ಭುಜ ಸೇವೆಯೊಂದಿಗೆ ಪ್ರಾರಂಭಗೊಂಡು ಶ್ರೀ ವೆಂಕಟರಮಣ ದೇವಳದಿಂದ ಹೊರಟು ಗದ್ದೆಕೇರಿ , ನವಭಾರತ್ ವೃತ್ತ , ಡೋಂಗೇರಕೇರಿ , ನ್ಯೂ ಚಿತ್ರ ಜುಂಕ್ಷನ್, ಕೆಳಗಿನ ಕಾರ್ಸ್ಟ್ರೀಟ್ , ರಥಬೀದಿಯಲ್ಲಿ ಶೋಭಾಯಾತ್ರೆ ನಡೆದು ಮಹಾಮಾಯ ತೀರ್ಥದಲ್ಲಿ ಜಲಸ್ತಂಭನ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಕಾಶೀನಾಥ್ ಆಚಾರ್ಯ, ಸುರೇಶ್ ಆಚಾರ್ಯ , ಜಯಂತ್ ಆಚಾರ್ಯ, ಶಾರದಾ ಮಹೋತ್ಸವ ಸಮಿತಿಯ ಜಿ . ದತ್ತಾತ್ರೇಯ ಭಟ್ , ಸುರೇಶ್ ವಿ ಕಾಮತ್, ಸತೀಶ್ ಪ್ರಭು, ಗಣೇಶ್ ಬಾಳಿಗಾ, ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಗಣೇಶ್ ಕಾಮತ್ ಪದಾಧಿಕಾರಿಗಳು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ದೇಶ, ವಿದೇಶಗಳಿಂದ ಸಹಸ್ರಾರು ಶ್ರೀ ಮಾತೆಯ ಭಜಕರು ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 103rd Sharada Mahotsava at Sri Venkataramana Temple and Acharya Math in Mangaluru’s Car Street concluded with grandeur on Friday. Over four days, the idol of Goddess Sharada was adorned in various forms — Saraswati, Durga, Chandika, and finally Sharada Mata — before being taken in a vibrant procession.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm