ಬ್ರೇಕಿಂಗ್ ನ್ಯೂಸ್
04-10-25 10:29 pm Mangalore Correspondent ಕರಾವಳಿ
ಉಳ್ಳಾಲ, ಅ.4 : ಉಳ್ಳಾಲ ಶಾರದೋತ್ಸವ ಧಾರ್ಮಿಕತೆಯ ಆಚರಣೆಯ ಜೊತೆಯಲ್ಲಿ ಉಳ್ಳಾಲ ಪ್ರದೇಶದ ಸೌಹಾರ್ದತೆಯ ಸಂಕೇತವೂ ಆಗಿದೆ. ಮೊನ್ನೆ ನಡೆದ ಶಾರದೋತ್ಸವ ಶೋಭಾಯಾತ್ರೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ನಡೆದ ಘರ್ಷಣೆ ಮತ್ತು ಪ್ರತಿಭಟನೆ ವಿಷಾದನೀಯ. ಘಟನೆಗೆ ಕೆಲ ಪೊಲೀಸರ ದುರ್ವರ್ತನೆಯೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದೇಶದಲ್ಲಿ ಸ್ಪೀಕರ್ ಕಾನ್ಫರೆನ್ಸ್ ನಲ್ಲಿರುವ ಯು.ಟಿ.ಖಾದರ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರಿಗೆ ನಿರ್ದೇಶನ ನೀಡಿದ್ದಾರೆ.
ಉಳ್ಳಾಲದಲ್ಲಿ ಕಳೆದ 78 ವರ್ಷಗಳಿಂದ ಶಾರದೋತ್ಸವ ಶೋಭಾಯಾತ್ರೆ ಅತ್ಯಂತ ಶ್ರದ್ಧೆ, ಪಾವಿತ್ರ್ಯತೆಯಿಂದ ನಡೆದುಕೊಂಡು ಬಂದಿದೆ. ಇಂತಹ ಶೋಭಾಯಾತ್ರೆಯು ಕೆಲಕಾಲ ಸ್ಥಗಿತಗೊಂಡು ಗೊಂದಲ ಉಂಟಾಗಿರುವುದು ವಿಷಾದನೀಯ. ಧಾರ್ಮಿಕ ನಂಬಿಕೆ, ಆಚರಣೆಗಳಿಗೆ ಎಂದಿಗೂ ಅಡ್ಡಿಯಾಗಬಾರದು. ಅಮಾಯಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿಯೆಂದು ಯು.ಟಿ.ಖಾದರ್ ಹೇಳಿದ್ದಾರೆ.


ಕಳೆದ ಗುರುವಾರ ರಾತ್ರಿ ಉಳ್ಳಾಲದಲ್ಲಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಪೊಲೀಸರು ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನ ಆಫ್ ಮಾಡಿದ್ದರು. ಈ ವೇಳೆ ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಬ್ಬರು ಅಮಾಯಕರನ್ನ ಸೇರಿಸಿ ಒಟ್ಟು ಮೂವರು ಯುವಕರನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿರಿಸಿದ್ದರು. ಅಮಾಯಕರ ಬಂಧನ ಖಂಡಿಸಿ ಸಮಾರು ಮೂರೂವರೆ ಗಂಟೆಗಳ ಕಾಲ ಶಾರದಾ ವಿಗ್ರಹವನ್ನ ರಸ್ತೆಯಲ್ಲಿರಿಸಿದ ಸಾರ್ವಜನಿಕರು ಉಳ್ಳಾಲ ಠಾಣೆಯ ಮುಂಭಾಗದಲ್ಲಿ ನೆರೆದು ಪ್ರತಿಭಟಿಸಿದ್ದರು. ಬಿಜೆಪಿ ಮುಖಂಡರ ಮಧ್ಯ ಪ್ರವೇಶ ಮತ್ತು ಭಾರೀ ಪ್ರತಿಭಟನೆಗೆ ಮಣಿದ ಪೊಲೀಸರು ಇಬ್ಬರು ಯುವಕರನ್ನ ಬಿಟ್ಟು ಕಳುಹಿಸಿದ್ದರು.
The Sharadotsava procession in Ullal, known for its religious devotion and communal harmony, witnessed an unfortunate clash between police and the public last week. Speaker UT Khader, currently abroad, expressed regret over the incident and directed Mangaluru City Police Commissioner Sudhir Kumar Reddy to investigate and take strict action against the erring officers. The controversy began when police allegedly switched off loudspeakers of tableaux during the procession, sparking a confrontation with locals. Three youths, including two said to be innocent, were detained, leading to a three-hour protest where devotees placed the Sharada idol on the road outside Ullal police station.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm