ಬ್ರೇಕಿಂಗ್ ನ್ಯೂಸ್
08-10-25 10:09 pm Mangalore Correspondent ಕರಾವಳಿ
ಉಳ್ಳಾಲ, ಅ.8 : ಉಳ್ಳಾಲದ ಕೋಟೆಪುರದ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕ (ಗೋದಾಮು)ದಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು , ಗೋದಾಮು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸಮೀಪದ ಫ್ಯಾಕ್ಟರಿಯ ಬಾಯ್ಲರ್ಗೂ ಬೆಂಕಿ ವ್ಯಾಪಿಸಿದ್ದು ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಭಾರೀ ಪ್ರಮಾಣದ ಅವಘಡ ತಪ್ಪಿದೆ.
ಎಚ್.ಕೆ.ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಮೀಲ್ ಫ್ಯಾಕ್ಟರಿ ಗೋದಾಮಿನಲ್ಲಿ ಬೆಂಕಿ ಅವಘಡ ನಡೆದಿದೆ. ಸಂಜೆ ವೇಳೆ ಗೋದಾಮಿನ ಒಳಗಡೆ ಕಾಣಿಸಿಕೊಂಡ ಬೆಂಕಿ ಏಕಾಏಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆ ಗೋದಾಮಿನ ಹೊರಕ್ಕೂ ವ್ಯಾಪಿಸಿದ್ದು ಸಮೀಪದ ಫಿಶ್ ಮೀಲ್ ಫ್ಯಾಕ್ಟರಿಯ ಬಾಯ್ಲರ್ಗೆ ತಗಲುವಷ್ಟರಲ್ಲಿ ಸಮಯ ಪ್ರಜ್ಞೆ ಮೆರೆದ ಸ್ಥಳೀಯರು ನೀರು ಎರಚಿ ಬೆಂಕಿಯ ಕೆನ್ನಾಲಿಗೆಯನ್ನ ತಹಬದಿಗೆ ತಂದಿದ್ದಾರೆ. ಬಾಯ್ಲರ್ ಗೆ ಬೆಂಕಿ ತಗಲುತ್ತಿದ್ದರೆ ಅದು ಸ್ಫೋಟಗೊಂಡು ಸ್ಥಳೀಯ ನಿವಾಸಿಗಳ ಮಾರಣಹೋಮವೇ ನಡೆಯುತ್ತಿತ್ತೆಂದು ಸ್ಥಳೀಯರು ದೂರಿದ್ದಾರೆ. ತುಂಬಾ ಹೊತ್ತಿನ ಬಳಿಕ ಮಂಗಳೂರಿನಿಂದ ಅಗ್ನಿಶಾಮಕ ದಳದ ವಾಹನ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.






ಕೋಟೆಪುರದ ಜನನಿಬಿಡ ಪ್ರದೇಶದಲ್ಲಿ ಸಾಸಿವೆ ಬೀಳಲೂ ಅವಕಾಶವಿಲ್ಲದಂತೆ ಒಂದೇ ಕಡೆಯಲ್ಲಿ ಹದಿನಾಲ್ಕು ಫ್ಯಾಕ್ಟರಿಗಳು ನಿಯಮಗಳನ್ನ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದು ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಅಪಾಯದಲ್ಲಿರಿಸಿ ಫಿಶ್ ಮೀಲ್ ಘಟಕಗಳು ಕಾರ್ಯಾಚರಿಸುತ್ತಿದ್ದರೂ, ಅಧಿಕಾರಿಗಳು ಮೌನ ವಹಿಸಿದ್ದಾರೆ. ನಿಯಮಗಳನ್ನ ಉಲ್ಲಂಘಿಸಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವ ಫಿಶ್ ಫುಡ್ ಮತ್ತು ಆಯಿಲ್ ಮಿಲ್ ಸೇರಿ ಒಟ್ಟು ಹದಿನಾಲ್ಕು ಫ್ಯಾಕ್ಟರಿಗಳಲ್ಲಿ ಕನಿಷ್ಟ ಸುರಕ್ಷತಾ ಕ್ರಮಗಳನ್ನೇ ಅನುಸರಿಸುತ್ತಿಲ್ಲ. ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳೂ ಸ್ಥಳದಲ್ಲಿಲ್ಲ. ಘಟನೆ ಸಂಭವಿಸಿದಾಗ ಮಂಗಳೂರಿನಿಂದಲೇ ತುರ್ತು ವಾಹನಗಳು ಇಲ್ಲಿಗೆ ಬರಬೇಕಾಗಿದೆ. ಸ್ವಲ್ಪ ಎಚ್ಚರಿಕೆ ತಪ್ಪಿದರೂ ಪ್ರದೇಶದ ನೂರಾರು ಮನೆಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ.
ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಫಿಶ್ ಮೀಲ್ ಫ್ಯಾಕ್ಟರಿಗಳಿಗೆ ಸಾಗುವ ಲಾರಿಗಳು ಮೀನಿನ ತ್ಯಾಜ್ಯವನ್ನ ರಸ್ತೆಗೆ ಸುರಿಸಿ ಪ್ರದೇಶವನ್ನ ಗಬ್ಬು ನಾರಿಸುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇಷ್ಟಲ್ಲದೆ ಫ್ಯಾಕ್ಟರಿಗಳಿಗೆ ಮಂಗಳೂರು ಮತ್ತು ಕೇರಳದಿಂದ ದಿವಸಕ್ಕೆ ಇನ್ನೂರಕ್ಕೂ ಅಧಿಕ ಕಂಟೇನರ್ ಇನ್ನಿತರ ಲಾರಿಗಳು ಸಾಗುತ್ತಿದ್ದು ರಸ್ತೆಯಲ್ಲೇ ಕೆಟ್ಟು ನಿಂತಿದ್ದರಿಂದ 3-4 ದಿನದ ವರೆಗೂ ಉಳ್ಳಾಲದ ರಾಜರಸ್ತೆ ಹಾಗೂ ತೊಕ್ಕೊಟ್ಟು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಆಕ್ರೋಶಗೊಂಡಿದ್ದರು. ಹೆಡ್ ಲೈನ್ ಕರ್ನಾಟಕ ವರದಿಗೆ ಸ್ಫಂದಿಸಿದ ಡಿಸಿಪಿ ರವಿಶಂಕರ್ ಅವರು ಟ್ರಾಫಿಕ್ ಪೊಲೀಸರ ಮೂಲಕ ತ್ಯಾಜ್ಯವನ್ನ ರಸ್ತೆಗೆ ಹರಿಸುವ ಲಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
A major fire broke out on Wednesday evening at a fish meal processing unit warehouse in Kotepura, Ullal, causing heavy property damage worth several lakhs. The fire, which started inside the warehouse owned by H.K. Khader’s MMP Fish Meal Factory, quickly spread toward a nearby factory boiler.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm