ಬ್ರೇಕಿಂಗ್ ನ್ಯೂಸ್
09-10-25 01:59 pm Udupi Correspondent ಕರಾವಳಿ
ಉಡುಪಿ, ಅ.9 : 13 ವರ್ಷಗಳ ಹಿಂದೆ ಪಿಯುಸಿ ಕಲಿಯುತ್ತಿದ್ದಾಗ ಕಾಣೆಯಾಗಿದ್ದ ಯುವಕನನ್ನು ಉಡುಪಿ ಪೊಲೀಸರು ಹುಡುಕಾಡಿ ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು ಯುವಕನನ್ನು ಮತ್ತೆ ಮನೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಕಾರ್ಕಳ ತಾಲೂಕಿನ ಮುಂಡ್ಕೂರು ಬಳಿಯ ನಿವಾಸಿ ಪ್ರಭಾಕರ ಪ್ರಭು ಎಂಬವರ ಮಗ ಅನಂತಕೃಷ್ಣ ಪ್ರಭು(16) 13 ವರ್ಷಗಳ ಬಳಿಕ ಮರಳಿ ಗೂಡು ಸೇರಿದ ಯುವಕ. 2012 ಡಿಸೆಂಬರ್ 6ರಂದು ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಗ ಮನೆಯಿಂದ ದೇವಸ್ಥಾನಕ್ಕೆಂದು ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದ. ಈ ಬಗ್ಗೆ ಅವರ ತಂದೆ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನೆಯವರಿಗೆ ಹೆದರಿ ಮತ್ತು ಮುಖ ತೋರಿಸಲಾಗದೆ ಮನೆಯಿಂದ ತಪ್ಪಿಸಿಕೊಂಡಿದ್ದ. ಯಾವುದೇ ಸುಳಿವು ಲಭಿಸದ ಕಾರಣ ಪೊಲೀಸರು ಹುಡುಕಾಟ ಕೈಬಿಟ್ಟಿದ್ದರು. ವಿಶೇಷ ತನಿಖಾ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು. ಇತ್ತೀಚೆಗೆ ಯುವಕ ಬೆಂಗಳೂರಿನಲ್ಲಿ ವಾಸವಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ, ಅನಂತಕೃಷ್ಣ (29) ನನ್ನು ಭೇಟಿ ಮಾಡಿದ್ದರು. ಅಲ್ಲಿಂದ ಉಡುಪಿಗೆ ಕರೆತಂದು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. 13 ವರ್ಷಗಳಿಂದ ಪತ್ತೆಯಾಗದೇ ಇರುವ ಹಳೆ ಪ್ರಕರಣವನ್ನು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೂಚನೆಯಂತೆ, ಡಿವೈಎಸ್ಪಿ ಪ್ರಭು ಡಿ.ಟಿ, ಬ್ರಹ್ಮಾವರ ಎಸ್ಐ ಸುದರ್ಶನ್ ದೊಡ್ಮನಿ, ಉಡುಪಿ ನಗರ ಎಸ್ಐ ಈರಣ್ಣ ಶಿರಗುಂಪಿ, ಹೆಡ್ ಕಾನ್ಸ್ಟೇಬಲ್ ಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಭೇದಿಸಲು ಯಶಸ್ವಿಯಾಗಿದೆ.
ಪತ್ತೆಯಾಗದ ಹಳೆ ಪ್ರಕರಣಗಳನ್ನು ಕೆದಕಿ, ಕೇಸ್ ಪತ್ತೆ ಮಾಡುವ ಬಗ್ಗೆ ಎಸ್ಪಿ ಹರಿರಾಮ್ ಟಾಸ್ಕ್ ನೀಡಿದ್ದಾರೆ.
A young man who went missing 13 years ago while studying in PUC has finally been reunited with his family, thanks to the efforts of the Udupi police who traced him in Bengaluru.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm