ಬ್ರೇಕಿಂಗ್ ನ್ಯೂಸ್
10-10-25 06:52 pm Mangalore Correspondent ಕರಾವಳಿ
ಮಂಗಳೂರು, ಅ.10 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಕಾವೂರು ಬಳಿಯ ಕುಂಜತ್ ಬೈಲಿನಲ್ಲಿ ಕಾದಿರಿಸಲಾದ ಲೇಔಟ್ ಅವೈಜ್ಞಾನಿಕ ರೀತಿಯಲ್ಲಿ ಮಾಡಿದ್ದಾರೆ. ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ಪಡೆದಿದ್ದು, ಅದನ್ನು ಅಭಿವೃದ್ಧಿ ಪಡಿಸದೆ ಮಾರಾಟಕ್ಕಿಟ್ಟಿದ್ದಾರೆ. ಈಗ ಕನಿಷ್ಠ ಸರ್ಕಾರಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕಾದ ಸವಾಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಡಾ ಮತ್ತು ಮಂಗಳೂರು ನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈ ವೇಳೆ, ಮುಡಾ ಲೇಔಟ್ ಬಗ್ಗೆ ಪ್ರಸ್ತಾಪಿಸುತ್ತ ಕುಂಜತ್ ಬೈಲ್ ಮತ್ತು ಕೊಣಾಜೆಯಲ್ಲಿ ಲೇಔಟ್ ಮಾಡಲಾಗಿದೆ. ಆದರೆ ಕುಂಜತ್ತಬೈಲಿನ ಲೇಔಟ್ ಅಭಿವೃದ್ಧಿ ಆಗಿಲ್ಲ. ಅದರ ಭೂಖರೀದಿ, ಹಿಂದು ಮುಂದಿನ ವಿಚಾರ ನೋಡಲು ಹೋದರೆ ಬಹಳಷ್ಟು ಇದೆ. ಸದ್ಯಕ್ಕೆ ಅಲ್ಲಿ ಸರ್ಕಾರಕ್ಕೆ ನಷ್ಟ ಆಗದಂತೆ ಏನೇನು ಮಾಡಬೇಕು ಎನ್ನುವ ಬಗ್ಗೆ ಅಧಿಕಾರಿಗಳ ವರದಿ ಕೇಳಿದ್ದೇನೆ. 20 ಶೇಕಡಾ ಅಷ್ಟೇ ಮಾರಾಟ ಆಗಿದೆ ಎಂದು ಹೇಳಿದರು.
ಮುಡಾ ಲೇಔಟ್ ಬಗ್ಗೆ ನವೆಂಬರ್ ನಲ್ಲಿ ಮತ್ತೊಮ್ಮೆ ಪರಿಶೀಲನೆ ಮಾಡುತ್ತೇನೆ. ಚೇಳಾಯರು ಸೈಟ್ ಬಗ್ಗೆ ಸಮಸ್ಯೆ ಇದೆ. ಎರಡು ಕಡೆ ಸೈಟ್ ಮಾರಾಟವಾಗಿ ಆದಾಯ ಬಂದರೆ ಅಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಬಹುದಾಗಿದೆ ಎಂದರು.
ಸೋಮೇಶ್ವರದಿಂದ ಸಸಿಹಿತ್ಲು ವರೆಗೆ ಮಂಗಳಾ ಕಾರ್ನಿಶ್ ಹೆಸರಲ್ಲಿ ರಸ್ತೆ ಮಾಡುವುದನ್ನು ಮಾಸ್ಟರ್ ಪ್ಲಾನ್ ಅಡಿ ತರಲಾಗಿದೆ. ಮಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಎಲ್ಲ ಅವಕಾಶಗಳಿದ್ದು, ಸಿಎಂ ಮತ್ತು ಡಿಸಿಎಂ ಇಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. 135 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್ ಮಾಡಲು ಸಂಪುಟದ ಒಪ್ಪಿಗೆ ಸಿಕ್ಕಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಐಟಿ ಬಿಟಿ ಬೆಳವಣಿಗೆ ಮಂಗಳೂರಿನ ಮಟ್ಟಿಗೆ ಗೇಮ್ ಚೇಂಜರ್ ಆಗಬಹುದು. ಪಿಪಿಟಿ ಮಾಡೆಲ್ ನಲ್ಲಿ ಐಟಿ ಪಾರ್ಕ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಅನಿಲ್ ಕುಮಾರ್ ಇದ್ದರು.
District in-charge and Urban Development Minister Dinesh Gundu Rao has expressed strong dissatisfaction over the unscientific layout developed by Mangalore Urban Development Authority (MUDA) at Kunjathbail near Kavoor. He stated that MUDA had acquired land at prices higher than market rates but failed to develop it before putting it up for sale, resulting in poor response — with only about 20% of the sites sold so far.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm