ಬ್ರೇಕಿಂಗ್ ನ್ಯೂಸ್
10-10-25 06:52 pm Mangalore Correspondent ಕರಾವಳಿ
ಮಂಗಳೂರು, ಅ.10 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಕಾವೂರು ಬಳಿಯ ಕುಂಜತ್ ಬೈಲಿನಲ್ಲಿ ಕಾದಿರಿಸಲಾದ ಲೇಔಟ್ ಅವೈಜ್ಞಾನಿಕ ರೀತಿಯಲ್ಲಿ ಮಾಡಿದ್ದಾರೆ. ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ಪಡೆದಿದ್ದು, ಅದನ್ನು ಅಭಿವೃದ್ಧಿ ಪಡಿಸದೆ ಮಾರಾಟಕ್ಕಿಟ್ಟಿದ್ದಾರೆ. ಈಗ ಕನಿಷ್ಠ ಸರ್ಕಾರಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕಾದ ಸವಾಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಡಾ ಮತ್ತು ಮಂಗಳೂರು ನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈ ವೇಳೆ, ಮುಡಾ ಲೇಔಟ್ ಬಗ್ಗೆ ಪ್ರಸ್ತಾಪಿಸುತ್ತ ಕುಂಜತ್ ಬೈಲ್ ಮತ್ತು ಕೊಣಾಜೆಯಲ್ಲಿ ಲೇಔಟ್ ಮಾಡಲಾಗಿದೆ. ಆದರೆ ಕುಂಜತ್ತಬೈಲಿನ ಲೇಔಟ್ ಅಭಿವೃದ್ಧಿ ಆಗಿಲ್ಲ. ಅದರ ಭೂಖರೀದಿ, ಹಿಂದು ಮುಂದಿನ ವಿಚಾರ ನೋಡಲು ಹೋದರೆ ಬಹಳಷ್ಟು ಇದೆ. ಸದ್ಯಕ್ಕೆ ಅಲ್ಲಿ ಸರ್ಕಾರಕ್ಕೆ ನಷ್ಟ ಆಗದಂತೆ ಏನೇನು ಮಾಡಬೇಕು ಎನ್ನುವ ಬಗ್ಗೆ ಅಧಿಕಾರಿಗಳ ವರದಿ ಕೇಳಿದ್ದೇನೆ. 20 ಶೇಕಡಾ ಅಷ್ಟೇ ಮಾರಾಟ ಆಗಿದೆ ಎಂದು ಹೇಳಿದರು.
ಮುಡಾ ಲೇಔಟ್ ಬಗ್ಗೆ ನವೆಂಬರ್ ನಲ್ಲಿ ಮತ್ತೊಮ್ಮೆ ಪರಿಶೀಲನೆ ಮಾಡುತ್ತೇನೆ. ಚೇಳಾಯರು ಸೈಟ್ ಬಗ್ಗೆ ಸಮಸ್ಯೆ ಇದೆ. ಎರಡು ಕಡೆ ಸೈಟ್ ಮಾರಾಟವಾಗಿ ಆದಾಯ ಬಂದರೆ ಅಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಬಹುದಾಗಿದೆ ಎಂದರು.
ಸೋಮೇಶ್ವರದಿಂದ ಸಸಿಹಿತ್ಲು ವರೆಗೆ ಮಂಗಳಾ ಕಾರ್ನಿಶ್ ಹೆಸರಲ್ಲಿ ರಸ್ತೆ ಮಾಡುವುದನ್ನು ಮಾಸ್ಟರ್ ಪ್ಲಾನ್ ಅಡಿ ತರಲಾಗಿದೆ. ಮಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಎಲ್ಲ ಅವಕಾಶಗಳಿದ್ದು, ಸಿಎಂ ಮತ್ತು ಡಿಸಿಎಂ ಇಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. 135 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್ ಮಾಡಲು ಸಂಪುಟದ ಒಪ್ಪಿಗೆ ಸಿಕ್ಕಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಐಟಿ ಬಿಟಿ ಬೆಳವಣಿಗೆ ಮಂಗಳೂರಿನ ಮಟ್ಟಿಗೆ ಗೇಮ್ ಚೇಂಜರ್ ಆಗಬಹುದು. ಪಿಪಿಟಿ ಮಾಡೆಲ್ ನಲ್ಲಿ ಐಟಿ ಪಾರ್ಕ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಅನಿಲ್ ಕುಮಾರ್ ಇದ್ದರು.
District in-charge and Urban Development Minister Dinesh Gundu Rao has expressed strong dissatisfaction over the unscientific layout developed by Mangalore Urban Development Authority (MUDA) at Kunjathbail near Kavoor. He stated that MUDA had acquired land at prices higher than market rates but failed to develop it before putting it up for sale, resulting in poor response — with only about 20% of the sites sold so far.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm