ಬ್ರೇಕಿಂಗ್ ನ್ಯೂಸ್
10-10-25 06:52 pm Mangalore Correspondent ಕರಾವಳಿ
ಮಂಗಳೂರು, ಅ.10 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಕಾವೂರು ಬಳಿಯ ಕುಂಜತ್ ಬೈಲಿನಲ್ಲಿ ಕಾದಿರಿಸಲಾದ ಲೇಔಟ್ ಅವೈಜ್ಞಾನಿಕ ರೀತಿಯಲ್ಲಿ ಮಾಡಿದ್ದಾರೆ. ಮಾರುಕಟ್ಟೆಗಿಂತ ಹೆಚ್ಚಿನ ದರದಲ್ಲಿ ಪಡೆದಿದ್ದು, ಅದನ್ನು ಅಭಿವೃದ್ಧಿ ಪಡಿಸದೆ ಮಾರಾಟಕ್ಕಿಟ್ಟಿದ್ದಾರೆ. ಈಗ ಕನಿಷ್ಠ ಸರ್ಕಾರಕ್ಕೆ ನಷ್ಟವಾಗದಂತೆ ನೋಡಿಕೊಳ್ಳಬೇಕಾದ ಸವಾಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಡಾ ಮತ್ತು ಮಂಗಳೂರು ನಗರ ಪಾಲಿಕೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈ ವೇಳೆ, ಮುಡಾ ಲೇಔಟ್ ಬಗ್ಗೆ ಪ್ರಸ್ತಾಪಿಸುತ್ತ ಕುಂಜತ್ ಬೈಲ್ ಮತ್ತು ಕೊಣಾಜೆಯಲ್ಲಿ ಲೇಔಟ್ ಮಾಡಲಾಗಿದೆ. ಆದರೆ ಕುಂಜತ್ತಬೈಲಿನ ಲೇಔಟ್ ಅಭಿವೃದ್ಧಿ ಆಗಿಲ್ಲ. ಅದರ ಭೂಖರೀದಿ, ಹಿಂದು ಮುಂದಿನ ವಿಚಾರ ನೋಡಲು ಹೋದರೆ ಬಹಳಷ್ಟು ಇದೆ. ಸದ್ಯಕ್ಕೆ ಅಲ್ಲಿ ಸರ್ಕಾರಕ್ಕೆ ನಷ್ಟ ಆಗದಂತೆ ಏನೇನು ಮಾಡಬೇಕು ಎನ್ನುವ ಬಗ್ಗೆ ಅಧಿಕಾರಿಗಳ ವರದಿ ಕೇಳಿದ್ದೇನೆ. 20 ಶೇಕಡಾ ಅಷ್ಟೇ ಮಾರಾಟ ಆಗಿದೆ ಎಂದು ಹೇಳಿದರು.
ಮುಡಾ ಲೇಔಟ್ ಬಗ್ಗೆ ನವೆಂಬರ್ ನಲ್ಲಿ ಮತ್ತೊಮ್ಮೆ ಪರಿಶೀಲನೆ ಮಾಡುತ್ತೇನೆ. ಚೇಳಾಯರು ಸೈಟ್ ಬಗ್ಗೆ ಸಮಸ್ಯೆ ಇದೆ. ಎರಡು ಕಡೆ ಸೈಟ್ ಮಾರಾಟವಾಗಿ ಆದಾಯ ಬಂದರೆ ಅಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಬಹುದಾಗಿದೆ ಎಂದರು.
ಸೋಮೇಶ್ವರದಿಂದ ಸಸಿಹಿತ್ಲು ವರೆಗೆ ಮಂಗಳಾ ಕಾರ್ನಿಶ್ ಹೆಸರಲ್ಲಿ ರಸ್ತೆ ಮಾಡುವುದನ್ನು ಮಾಸ್ಟರ್ ಪ್ಲಾನ್ ಅಡಿ ತರಲಾಗಿದೆ. ಮಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಎಲ್ಲ ಅವಕಾಶಗಳಿದ್ದು, ಸಿಎಂ ಮತ್ತು ಡಿಸಿಎಂ ಇಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. 135 ಕೋಟಿ ವೆಚ್ಚದಲ್ಲಿ ಐಟಿ ಪಾರ್ಕ್ ಮಾಡಲು ಸಂಪುಟದ ಒಪ್ಪಿಗೆ ಸಿಕ್ಕಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಐಟಿ ಬಿಟಿ ಬೆಳವಣಿಗೆ ಮಂಗಳೂರಿನ ಮಟ್ಟಿಗೆ ಗೇಮ್ ಚೇಂಜರ್ ಆಗಬಹುದು. ಪಿಪಿಟಿ ಮಾಡೆಲ್ ನಲ್ಲಿ ಐಟಿ ಪಾರ್ಕ್ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಅನಿಲ್ ಕುಮಾರ್ ಇದ್ದರು.
District in-charge and Urban Development Minister Dinesh Gundu Rao has expressed strong dissatisfaction over the unscientific layout developed by Mangalore Urban Development Authority (MUDA) at Kunjathbail near Kavoor. He stated that MUDA had acquired land at prices higher than market rates but failed to develop it before putting it up for sale, resulting in poor response — with only about 20% of the sites sold so far.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm