ಬ್ರೇಕಿಂಗ್ ನ್ಯೂಸ್
11-10-25 07:18 pm Mangalore Correspondent ಕರಾವಳಿ
ಮಂಗಳೂರು, ಅ.11 : ಮುಸ್ಲಿಂ ಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ನಿಂದಿಸಿದ ಪ್ರಕರಣದಲ್ಲಿ ಮಲಯಾಳಂ ನಟ ಜಯಕೃಷ್ಣನ್ ಮತ್ತು ಅವರ ಸ್ನೇಹಿತ ಸಂತೋಷ್ ಅಬ್ರಾಹಂ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಓಲಾ ಕ್ಯಾಬ್ ಬುಕ್ ಮಾಡಿ, ಕರೆ ಮಾಡಿದ್ದಕ್ಕೆ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿದ್ದ ಆರೋಪದಲ್ಲಿ ಮಂಗಳೂರಿನ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಲಯಾಳಂ ಸಿನಿಮಾ ನಟ ಜಯಕೃಷ್ಣನ್, ವಿಮಲ್ ಮತ್ತು ಸಂತೋಷ್ ವಿರುದ್ಧ ಕೇಸು ದಾಖಲಾಗಿತ್ತು.
ಜಯಕೃಷ್ಣನ್, ಸಂತೋಷ್ ಅಬ್ರಾಹಂ ಮತ್ತು ವಿಮಲ್ ಅವರು ಮಂಗಳೂರಿಗೆ ವಿಹಾರ ನಿಮಿತ್ತ ಆಗಮಿಸಿದ್ದು ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಸೆ.9ರಂದು ರಾತ್ರಿ ಇವರು ಓಲಾ ಮತ್ತು ರ್ಯಾಪಿಡೋ ಏಪ್ ನಲ್ಲಿ ಕ್ಯಾಬ್ ಬುಕ್ ಮಾಡಿದ್ದರು. ಟ್ಯಾಕ್ಸಿ ಬುಕ್ ಆಗಿದ್ದರಿಂದ ಕ್ಯಾಬ್ ಚಾಲಕ ಶಫೀಕ್ ಅಹ್ಮದ್ ಪಿಕಪ್ ಎಲ್ಲಿಂದ ಎಂದು ಕೇಳಲು ಕರೆ ಮಾಡಿದ್ದರು. ಆದರೆ ಕರೆ ಸ್ವೀಕರಿಸಿದ ವ್ಯಕ್ತಿಗಳು ಮದ್ಯದ ನಶೆಯಲ್ಲಿ ಚಾಲಕ ಮುಸ್ಲಿಂ ಎಂದು ತಿಳಿದು ಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡುವ ರೀತಿ ನಿಂದಿಸಿದ್ದಾರೆ. ಇದರ ಆಡಿಯೋ ರೆಕಾರ್ಡ್ ಆಗಿದ್ದು ಪೊಲೀಸರಿಗೆ ನೀಡಿದ್ದಾರೆ.
ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರಿಂದ ಚಾಲಕ ಅಹ್ಮದ್ ಶಫೀಕ್ ಉರ್ವಾ ಠಾಣೆಗೆ ದೂರು ನೀಡಿದ್ದು BNS 352, 353(2) ಅಡಿ ಪ್ರಕರಣ ದಾಖಲಾಗಿತ್ತು. ಉರ್ವಾ ಠಾಣೆ ಪೊಲೀಸರು ಮಲಯಾಳಂ ನಟನನ್ನು ಬೆಳಗ್ಗಿನಿಂದಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ಒಪ್ಪಿಕೊಂಡಿದ್ದು ಜೊತೆಗಿದ್ದ ಮೂವರದ್ದೂ ವಾಯ್ಸ್ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಮೂವರಲ್ಲಿ ಯಾರು ಆ ರೀತಿ ಮಾತನಾಡಿದ್ದು ಎಂದು ತಿಳಿಯಲು ವಾಯ್ಸ್ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಿದ್ದಾರೆ. ಜಯಕೃಷ್ಣನ್ ತಾನು ಮಾತನಾಡಿದ್ದಲ್ಲ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ವಾಯ್ಸ್ ಇವರದ್ದೇ ಎಂದು ಸಾಬೀತಾದ ಬಳಿಕ ಬಂಧನ ಆಗಲಿದೆ ಎನ್ನಲಾಗುತ್ತಿದೆ.
Mangaluru Police have detained Malayalam actor Jayakrishnan and his friend Santhosh Abraham for allegedly abusing a cab driver with communal slurs and calling him a “Muslim terrorist.” The incident occurred on September 9 when the duo, reportedly intoxicated, booked a ride via Ola and Rapido.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm