ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm