Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ನಿಧನ ; ಉಡುಪಿಗೆ ಸಿನಿಮಾ ಶೂಟಿಂಗ್ ಬಂದಿದ್ದಾಗ ಹೃದಯಾಘಾತಕ್ಕೀಡಾಗಿ ಸಾವು 

13-10-25 07:47 pm       Udupi Correspondent   ಕರಾವಳಿ

ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಉಡುಪಿಗೆ ಸಿನಿಮಾ ಚಿತ್ರೀಕರಣಕ್ಕೆ ಬಂದಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಉಡುಪಿ, ಅ.13 : ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಉಡುಪಿಗೆ ಸಿನಿಮಾ ಚಿತ್ರೀಕರಣಕ್ಕೆ ಬಂದಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಉಡುಪಿಯಲ್ಲಿ ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದಲ್ಲಿ ಚಿತ್ರೀಕರಣ ಮುಗಿಸಿ ಭಾನುವಾರ ರಾತ್ರಿ ಹೊಟೇಲ್ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ವಿಜಯಪುರ ಜಿಲ್ಲೆಯ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಬಿಗ್‌ ಬಾಸ್‌ ಸೀಸನ್‌ 7ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.

Renowned theatre artist and Kannada comedy actor Raju Talikote passed away in Udupi after suffering a heart attack on Sunday night. He was in the coastal town for the shooting of a new film starring Shine Shetty. Originally from Chikkasindagi in Sindagi taluk, Vijayapura district, Raju Talikote was found unresponsive in his hotel room and was rushed to Manipal Hospital, where doctors declared him dead.