ಬ್ರೇಕಿಂಗ್ ನ್ಯೂಸ್
14-10-25 06:39 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ. ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ ವೇಳೆ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬರಬೇಕಿದೆ.
ಕಳೆದ ವರ್ಷ ಮುದುಂಗಾರುಕಟ್ಟೆಯ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣದಲ್ಲಿ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಾಫ್ ಮಾದಕ ಪದಾರ್ಥಗಳ ವ್ಯಸನಿಯೂ ಆಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
The body of a 28-year-old man accused in a theft case was found at the Mudungarukatte bus stop in Baalepuni village on Monday. The deceased has been identified as Mohammad Niyaf, a resident of Pathuru. Police suspect that drug addiction may have caused his death.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 09:12 pm
Mangalore Correspondent
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm