ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದು ಸಾವು ; ಮೃತದೇಹ ತರಲು ಸಂಸದರ ಮೂಲಕ ಪ್ರಯತ್ನ 

14-10-25 10:13 pm       Mangalore Correspondent   ಕರಾವಳಿ

ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. 

ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. 

ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. 

ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.