ಬ್ರೇಕಿಂಗ್ ನ್ಯೂಸ್
14-10-25 10:13 pm Mangalore Correspondent ಕರಾವಳಿ
ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.
ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm